alex Certify ‘ಆಸೆ ಇದ್ರೆ ಪ್ರತಾಪ್ ಸಿಂಹ ಇನ್ನೊಂದು ಮದುವೆ ಆಗಲಿ’ : ಶಾಸಕ ತನ್ವೀರ್ ಸೇಠ್ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಸೆ ಇದ್ರೆ ಪ್ರತಾಪ್ ಸಿಂಹ ಇನ್ನೊಂದು ಮದುವೆ ಆಗಲಿ’ : ಶಾಸಕ ತನ್ವೀರ್ ಸೇಠ್ ಟಾಂಗ್

ಮೈಸೂರು : ಆಸೆ ಇದ್ದರೆ ಸಂಸದ ಪ್ರತಾಪ್ ಸಿಂಹ ಇನ್ನೊಂದು ಮದುವೆ ಆಗಲಿ, ಆಮೇಲೆ ನಮ್ಮ ಬಳಿ ಅನುಭವ ಹೇಳಿಕೊಳ್ಳಲಿ ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ.

ಮುಸ್ಲಿಮರಿಗೆ ಎರಡು ಮೂರು ಹೆಂಡತಿಯರಿರುತ್ತಾರೆ, ಅವರಲ್ಲಿ ಯಜಮಾನು ಯಾರು..? ಅವರಲ್ಲಿ ಯಾರಿಗೆ ಹಣ ಕೊಡುತ್ತೀರಿ ಎಂದು ಸಂಸದ ಪ್ರತಾಪ್ ಸಿಂಹ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಶಾಸಕ ತನ್ವೀರ್ ಸೇಠ್ ಆಸೆ ಇದ್ದರೆ ಸಂಸದ ಪ್ರತಾಪ್ ಸಿಂಹ ಇನ್ನೊಂದು ಮದುವೆ ಆಗಲಿ, ಆಮೇಲೆ ನಮ್ಮ ಬಳಿ ಅನುಭವ ಹೇಳಿಕೊಳ್ಳಲಿ ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. ಇಬ್ಬರು ಹೆಂಡಿರನ್ನು ಕಟ್ಟಿಕೊಂಡರೆ ಏನೆಲ್ಲ ತಾಪತ್ರಯ ಆಗುತ್ತದೆ ಅನ್ನೋದನ್ನು ಸ್ವಂತ ಅನುಭವದಿಂದ ನಮಗೆ ಹೇಳಲಿ ಎಂದರು.

ಬಲವಂತದ ಮತಾಂತರ ನಡೆಯಬಾರದು ಅಂತ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದೆ, ಆದ್ದರಿಂದ ಮತಾಂತರ ನಿಷೇಧ ಕಾಯಿದೆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...