alex Certify ನಾಳೆಯಿಂದ ಸಿರಿಗೆರೆ ಮಠದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಸಿರಿಗೆರೆ ಮಠದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

ಚಿತ್ರದುರ್ಗ: ಫೆಬ್ರವರಿ 14 ರಿಂದ 19 ರವರೆಗೆ ಸಿರಿಗೆರೆ ಸಂಸ್ಥಾನದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ವಿಜಯನಗರ ಜಿಲ್ಲೆ ಕೊಟ್ಟೂರಿನಲ್ಲಿ 9 ದಿನಗಳ ಕಾಲ ನಡೆಯಬೇಕಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವ ಶ್ರೀ ಮಠದಲ್ಲಿಯೇ ನಡೆಯಲಿದೆ.

ಫೆಬ್ರವರಿ 14 ರಂದು ನಡೆಯಲಿರುವ ಸಭಾಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಬೈರತಿ ಬಸವರಾಜ, ಸಿ.ಸಿ. ಪಾಟೀಲ್ ಮೊದಲಾದವರು ಭಾಗವಹಿಸಲಿದ್ದಾರೆ.

ಫೆಬ್ರವರಿ 15 ರಂದು ಸಭಾ ಕಾರ್ಯಕ್ರಮದಲ್ಲಿ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳಿಂದ ಪಿಟೀಲು ವಾದನ ಕಾರ್ಯಕ್ರಮವಿದೆ.

ಫೆಬ್ರವರಿ 16 ರಂದು ಶ್ರೀಗಳ ಸದ್ಧರ್ಮ ಸಿಂಹಾಸನಾರೋಹಣ ನೆರವೇರಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಮೊದಲಾದವರು ಭಾಗವಹಿಸಲಿದ್ದಾರೆ.

ಶ್ರೀ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ಬೆಳಗಿನ ಅವಧಿಯಲ್ಲಿ ವಿಚಾರಗೋಷ್ಠಿ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...