alex Certify BIG BREAKING: ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ನೇಮಕ, ಸಂಸಾರ ನೋಡಿಕೊಳ್ಳೋಕೆ ಅಲ್ಲ: ವರ್ಗಾವಣೆ ಬಗ್ಗೆ ಸಚಿವ ನಾಗೇಶ್ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ನೇಮಕ, ಸಂಸಾರ ನೋಡಿಕೊಳ್ಳೋಕೆ ಅಲ್ಲ: ವರ್ಗಾವಣೆ ಬಗ್ಗೆ ಸಚಿವ ನಾಗೇಶ್ ಪ್ರತಿಕ್ರಿಯೆ

ದಾವಣಗೆರೆ: ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರನ್ನು ನೇಮಿಸಲಾಗಿದೆ. ಸಂಸಾರ ನೋಡಿಕೊಳ್ಳೋಕೆ ಅಲ್ಲ ಎಂದು ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಬೆಳಲಗೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಸಮಸ್ಯೆಯೂ ಅರ್ಥವಾಗುತ್ತದೆ. ಮೊದಲು ಮಕ್ಕಳ ಸಮಸ್ಯೆ ಬಗೆಹರಿಸಬೇಕಿದೆ. ನಂತರ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.

ಮೂರು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಿಂತಿತ್ತು. ಎರಡು ದಿನದಿಂದ ವರ್ಗಾವಣೆ ಪ್ರಕ್ರಿಯೆ ಶುರುವಾಗಿದೆ. ಎಲ್ಲ ಶಿಕ್ಷಕರು ಸಂತೋಷ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳ ವಿಳಂಬವಾಗಿಲ್ಲ ಎಂದು ಹೇಳಿದ್ದಾರೆ.

ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಸಂಸಾರ ನೋಡಿಕೊಳ್ಳಲು ಅಲ್ಲ. ಕಳೆದ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಿಂತಿತ್ತು. ಎರಡು ದಿನದಿಂದ ವರ್ಗಾವಣೆ ಪ್ರಕ್ರಿಯೆ ಮತ್ತೆ ಶುರುವಾಗಿದೆ. ರಾಜ್ಯದ ಎಲ್ಲಾ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಕೆಲವು ವೈಯಕ್ತಿಕ ಸಮಸ್ಯೆಗಳನ್ನು ಸಾಮೂಹಿಕವೆಂದು ಬಿಂಬಿಸಲಾಗದು. ಶಿಕ್ಷಕ ವೃತ್ತಿಗೆ ಸೇರುವಾಗ ಜಿಲ್ಲಾವಾರು ಆಯ್ಕೆ ಗೊತ್ತಿರಲಿಲ್ಲವೆ? ರಾಯಚೂರು ದೂರ ಎಂಬುದು ಅವರಿಗೆ ತಿಳಿದಿರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವಿಳಂಬವಾಗಿಲ್ಲ. ಶಿಕ್ಷಕರನ್ನು ನೇಮಕ ಮಾಡಿರುವುದು ಮಾಡುವುದು ಸಂಸಾರ ನೋಡಿಕೊಳ್ಳಲು ಅಲ್ಲವೆಂದು ಕಿಡಿಕಾರಿದರು. ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಬೇಕು. ನಂತರ ಜಿಲ್ಲಾವಾರು ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...