alex Certify ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

ಬೀದರ್: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಕಾಲೇಜಿನಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕ, ಉಪನ್ಯಾಸಕರುಗಳಿಗೆ 2021 -22 ನೇ ಸಾಲಿಗೆ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ಅತಿಥಿ ಶಿಕ್ಷಕರ ನೇಮಕಕ್ಕೆ B.A B.Ed & B.sc B.Ed ಕೋರ್ಸ್ ಮತ್ತು ಉಪನ್ಯಾಸಕರ ಹುದ್ದೆಗೆ MA .BEd & M.sc B.Ed ಮುಗಿಸಿದ ಸಂಬಂಧಪಟ್ಟ ವಿಷಯವಾರು ಶಿಕ್ಷಕ, ಉಪನ್ಯಾಸಕರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತರು ತಮ್ಮ ಧೃಡೀಕೃತ ಸ್ವವಿವರ, ಅನುಭವ ಪ್ರಮಾಣ ಪತ್ರ ಅಂಕಪಟ್ಟಿಗಳೊAದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಗುರುನಾನಕ ಝಿರಾದಿಂದ ಚಿಕ್‌ಪೇಟ ರಿಂಗ್ ರಸ್ತೆ, ಎಲ್‌ಐಜಿ, ಎಮ್‌ಐಜಿ ಕಾಲೋನಿ ಹಿಂಭಾಗ, ಬೀದರ್ ಇಲ್ಲಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: ತಾಲೂಕ ವಿಸ್ತರಣಾಧಿಕಾರಿಗಳಾದ ಉಮೇಶ:-9448844387, ಪವಿತ್ರಾ-9731801013 ಸವಿತಾ-8073144502, ವಿಠಲ್ ಘಾಟೆ-9663948049 ಮತ್ತು ಜಿಲ್ಲಾ ಸಮನ್ವಯ ಅಧಿಕಾರಿಯಾದ ಡಾ.ಸುದರ್ಶನ-9164559747 ಇವರನ್ನು ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...