alex Certify ಶುಭ ಸುದ್ದಿ: ಕಲ್ಯಾಣ ಕರ್ನಾಟಕದ 5 ಸಾವಿರ ಸೇರಿ 15000 ಶಿಕ್ಷಕರು, 4000 ಅತಿಥಿ ಉಪನ್ಯಾಸಕರ ನೇಮಕಾತಿ; ಇಂಜಿನಿಯರಿಂಗ್ ಪದವೀಧರರಿಗೂ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಕಲ್ಯಾಣ ಕರ್ನಾಟಕದ 5 ಸಾವಿರ ಸೇರಿ 15000 ಶಿಕ್ಷಕರು, 4000 ಅತಿಥಿ ಉಪನ್ಯಾಸಕರ ನೇಮಕಾತಿ; ಇಂಜಿನಿಯರಿಂಗ್ ಪದವೀಧರರಿಗೂ ಅವಕಾಶ

ಬೆಂಗಳೂರು: ಶಿಕ್ಷಕರು ಉಪನ್ಯಾಸಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,000 ಶಿಕ್ಷಕರ ನೇಮಕಾತಿಗೆ ನಿರ್ಧರಿಸಿದೆ.

ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ 10,000 ಹಾಗೂ ಕರ್ನಾಟಕದ 5000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಕ್ರಮಕೈಗೊಳ್ಳಲಾಗಿದೆ. ಹಣಕಾಸು ಇಲಾಖೆ ಅನುಮತಿ ನೀಡಿದ್ದು, ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ 4000 ಅತಿಥಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ.

ಈ ಬಾರಿ ಇಂಜಿನಿಯರಿಂಗ್ ಪದವೀಧರರಿಗೆ ಕೂಡ ಶಿಕ್ಷಕರ ನೇಮಕಾತಿಗೆ ಪರಿಗಣಿಸಲಾಗುವುದು. ಪದವೀಧರರು, ಬಿಎಡ್, ಟಿಇಟಿ ಪಾಸಾದ ಅಭ್ಯರ್ಥಿಗಳ ಜೊತೆಗೆ ಇಂಜಿನಿಯರಿಂಗ್ ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

ಇಂಗ್ಲೀಷ್, ಪರಿಸರ ಅಧ್ಯಯನ, ವಿಜ್ಞಾನ, ಗಣಿತ ಇತರೆ ಗಳ ಶಿಕ್ಷಕರ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವೀಧರರಿಗೆ ಅವಕಾಶ ಕಲ್ಪಿಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...