alex Certify ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಭೇಟಿ ನೀಡಿ ಉಪಹಾರ ಸೇವಿಸುತ್ತಿದ್ದರು. ಆಗ ಶಿಕ್ಷಕ ಕೆ. ರಾಮು ಊಟ ಬಡಿಸುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿತ್ತು. ಈ ಕುರಿತಾದ ದೂರು ಆಧರಿಸಿ ನೋಡಲ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಸರ್ಕಾರಿ ನೌಕರನಾಗಿ ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷ್ಯ ತೋರಿರುವುದು, ಅನುಮತಿ ಪಡೆದುಕೊಳ್ಳದೆ ಕೇಂದ್ರ ಸ್ಥಾನ ಬಿಟ್ಟ ಕರ್ತವ್ಯಲೋಪದ ಮೇಲೆ ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಅಮಾನತು ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...