alex Certify ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ತರಗತಿ ಬಹಿಷ್ಕಾರ, ಧರಣಿಗೆ ಮುಂದಾದ ಶಿಕ್ಷಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ತರಗತಿ ಬಹಿಷ್ಕಾರ, ಧರಣಿಗೆ ಮುಂದಾದ ಶಿಕ್ಷಕರು

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆ, ಚುನಾವಣೆ ಕೆಲಸಕ್ಕೆ ಶಿಕ್ಷಕರ ಬಳಕೆ ಬಗ್ಗೆ ಇಲಾಖೆ ಮತ್ತು ಶಿಕ್ಷಣ ಸಚಿವರ ನಡೆಗೆ ರಾಜ್ಯ ಸರ್ಕಾರ ಶಿಕ್ಷಕರ ಸಂಘ ವಿರೋಧ ವ್ಯಕ್ತಪಡಿಸಿದೆ.

ತರಗತಿಗಳನ್ನು ಬಹಿಷ್ಕರಿಸಿ ಸರ್ಕಾರಿ ಶಾಲೆ ಶಿಕ್ಷಕರು ಧರಣಿಗೆ ಮುಂದಾಗಿದ್ದಾರೆ. ಈಗಾಗಲೇ ಎಸ್ಎಸ್ಎಲ್ಸಿ, ಪಿಯುಸಿ 5 ಮತ್ತು 8ನೇ ತರಗತಿ ಪರೀಕ್ಷೆ ನಿಗದಿಯಾಗಿದೆ. ಸಾಲು ಸಾಲು ಪರೀಕ್ಷೆಗಳ ನಡುವೆ ಶಿಕ್ಷಕರ ಸಂಘ ಧರಣಿಗೆ ಮುಂದಾಗಿದೆ.

ಚುನಾವಣೆ ಕೆಲಸಕ್ಕೆ ಕಡ್ಡಾಯ ಶಿಕ್ಷಕರ ಬಳಕೆ ವಿಚಾರ ಹಾಗೂ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈ ಬಿಡುವಂತೆ ಆಗ್ರಹಿಸಲಾಗಿದೆ. ಶಿಕ್ಷಣ ಇಲಾಖೆಗೆ ರಾಜ್ಯ ಶಿಕ್ಷಕರ ಸಂಘದಿಂದ ಎರಡು ದಿನ ಗಡುವು ನೀಡಲಾಗಿದೆ. ಎರಡು ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಧರಣಿ ನಡೆಸಲಾಗುವುದು. ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗೇಗೌಡ, ಈ ಬಗ್ಗೆ ಸಭೆ ನಡೆಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...