alex Certify ಶಿಕ್ಷಕರ ಬಹುದಿನದ ಕನಸು ನನಸು, ವರ್ಗಾವಣೆಗೆ ನಾಳೆ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಬಹುದಿನದ ಕನಸು ನನಸು, ವರ್ಗಾವಣೆಗೆ ನಾಳೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಕರ ಬಹುದಿನದ ಬೇಡಿಕೆ ಈಡೇರುವ ಸಮಯ ಹತ್ತಿರವಾಗಿದ್ದು, ನಾಳೆ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.

ವರ್ಗಾವಣೆಗಾಗಿ ಕಾಯುತ್ತಿರುವ ಶಿಕ್ಷಕರಿಗೆ ಅನುಕೂಲವಾಗುವಂತೆ ನಾಳೆ ವೇಳಾಪಟ್ಟಿ ಪ್ರಕಟಿಸಲಾಗುವುದು. ವಿಶೇಷ ಕೌನ್ಸೆಲಿಂಗ್ ಗೆ ಲಭ್ಯವಿರುವ ಖಾಲಿ ಹುದ್ದೆಗಳ ಪಟ್ಟಿಯನ್ನು ಪ್ರಕಟಿಸಲಿದ್ದು, ಕಳೆದ ಬಾರಿ ಕಡ್ಡಾಯ ವರ್ಗಾವಣೆಗಳಲ್ಲಿ ಅವಕಾಶ ಸಿಗದ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಿ, ವಿಶೇಷ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯೋಜನೆ ಮಾಡಲಾಗುತ್ತದೆ. ಜೇಷ್ಠತಾ ಕ್ರಮಾಂಕ ಪ್ರಕಟಿಸಿ ಆಕ್ಷೇಪಣಾ ಆಹ್ವಾನಿಸಿ ಪಟ್ಟಿ ಅಂತಿಮಗೊಳಿಸಲಾಗುವುದು. ಎಲ್ಲಾ ಬಾಧಿತ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆಸಲಾಗುವುದು.

ವರ್ಗಾವಣೆ ನಿಯಮ ಪ್ರಶ್ನಿಸಿ ಕೆಲವು ಶಿಕ್ಷಕರು ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಹೈಕೋರ್ಟ್ ಗೆ ಕೇವಿಯಟ್ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸುಗ್ರೀವಾಜ್ಞೆಯ ಮೂಲಕ ಶಿಕ್ಷಕರ ವರ್ಗಾವಣೆಗೆ ತಿದ್ದುಪಡಿ ತಂದು ಆಕ್ಷೇಪಣೆ ಸ್ವೀಕರಿಸಿ ಪರಿಶೀಲನೆ ನಂತರ ಅಂತಿಮ ನಿಯಮಗಳನ್ನು ರೂಪಿಸಲಾಗಿದೆ. ಬಹುತೇಕ ನಾಳೆಯೇ ವರ್ಗಾವಣೆಗೆ ವೇಳಾ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší