alex Certify BIG NEWS: ಕೈ ತಪ್ಪಿದ ಸರ್ಕಾರಿ ಶಾಲೆ ಶಿಕ್ಷಕ ಹುದ್ದೆ; ಮನನೊಂದ ಯುವಕ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೈ ತಪ್ಪಿದ ಸರ್ಕಾರಿ ಶಾಲೆ ಶಿಕ್ಷಕ ಹುದ್ದೆ; ಮನನೊಂದ ಯುವಕ ಆತ್ಮಹತ್ಯೆ

ರಾಯಚೂರು: ವ್ಯವಸ್ಥೆಯ ವಿರುದ್ಧ ಬೇಸತ್ತು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ.

ಚನ್ನಬಸವ (25) ಮೃತ ಯುವಕ. ಚಿಕ್ಕಬುದೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಪಕ್ಕದಲ್ಲಿಯೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

2022ರಲ್ಲಿ ಯುವಕ ಚನ್ನಬಸಪ್ಪ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದ. ಅಂತಿಮ ಲಿಸ್ಟ್ ನಲ್ಲಿಯೂ ಆಯ್ಕೆಯಾಗಿದ್ದ ಆದರೆ ಕೊನೆ ಹಂತದಲ್ಲಿ ಶಿಕ್ಷಕನ ಹುದ್ದೆ ಕೈತಪ್ಪಿದೆ. ಇದರಿಂದ ತೀವ್ರವಾಗಿ ನೊಂದಿದ್ದ ಯುವಕ ಈಗ ಏಕಾಏಕಿ ನೇಣಿಗೆ ಕೊರಳೊಡ್ಡಿದ್ದಾನೆ.

ತನ್ನ ಸಾವಿಗೆ ತಾನೇ ಕಾರಣ. ಪೋಷಕರು ಅಮಾಯಕರು ಎಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...