alex Certify ತಂದೆ ಮೊಬೈಲ್ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆ ಮೊಬೈಲ್ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕ…!

ತನ್ನ ತಂದೆ ಮೊಬೈಲಿಗೆ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ 14 ವರ್ಷದ ಬಾಲಕನೊಬ್ಬ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.

ಬಾಲಕನ ತಂದೆ ದಿನಗೂಲಿ ಕಾರ್ಮಿಕರಾಗಿದ್ದು, ಹಣಕಾಸಿನ ಮುಗ್ಗಟ್ಟಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಗನ ಮೊಬೈಲ್ ಫೋನಿಗೆ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸಿರಲಿಲ್ಲವೆನ್ನಲಾಗಿದೆ. ಇದರಿಂದ ಬೇಸರಗೊಂಡ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

ಅಲ್ಲದೇ ಬಾಲಕ ಮೊಬೈಲ್ ಗೇಮ್ಸ್ ಗೆ ದಾಸನಾಗಿದ್ದು, ಕಳೆದ ಕೆಲವು ದಿನಗಳಿಂದ ಈ ಗೇಮ್ ಆಡದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಎನ್ನಲಾಗಿದೆ. ಈ ಎಲ್ಲಾ ಕಾರಣಗಳಿಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವುದಾಗಿ ಜಬಲ್ಪುರ ಜಿಲ್ಲಾ ರಕ್ಷಣಾಧಿಕಾರಿ ಅಲೋಕ್ ಶರ್ಮಾ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...