alex Certify ಶ್ರಾವಣ ಪ್ರಯುಕ್ತ ದೇವಾಲಯದಲ್ಲಿ ಭಜನೆ ಮಾಡುವಾಗಲೇ ಕಂಬ ಬಿದ್ದು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರಾವಣ ಪ್ರಯುಕ್ತ ದೇವಾಲಯದಲ್ಲಿ ಭಜನೆ ಮಾಡುವಾಗಲೇ ಕಂಬ ಬಿದ್ದು ಸಾವು

ಯಾದಗಿರಿ: ದೇವಾಲಯದಲ್ಲಿ ಭಜನೆ ಮಾಡುವಾಗ ಕಲ್ಲಿನ ಕಂಬ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆ ವಡಗೇರಾ ಉಳ್ಳೆಸುಗೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿನ ಹನುಮಾನ್ ದೇವಸ್ಥಾನದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ದೇವಪ್ಪ ಪೂಜಾರಿ(40) ಮೃತಪಟ್ಟವರು ಎಂದು ಹೇಳಲಾಗಿದೆ. ಶ್ರಾವಣ ಮಾಸದ ಅಂಗವಾಗಿ ದೇವಾಲಯದಲ್ಲಿ ಭಜನೆ ನಡೆಯುತ್ತಿತ್ತು. ಈ ವೇಳೆ ನಿರಂತರ ಮಳೆಯಿಂದಾಗಿ ಶಿಥಿಲಗೊಂಡಿದ್ದ ಕಲ್ಲಿನ ಕಂಬ ಬಿದ್ದು ದೇವಪ್ಪ ಪೂಜಾರಿ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ವಡಗೇರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...