alex Certify ಒಂದೂವರೆ ಸಾವಿರ ರೂ.ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೂವರೆ ಸಾವಿರ ರೂ.ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣದ ವಿಚಾರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬರೋಬ್ಬರಿ 13 ಜನ ಸೇರಿ ಕೇವಲ ಒಂದೂವರೆ ಸಾವಿರ ರೂ. ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೆಹಬೂಬ್(19) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ನಗರದ ಎ.ಕೆ. ಕಾಲನಿ ಹತ್ತಿರ ಮಣಿಕಂಠ ಹಾಗೂ ಲಲಿತ್ ಎಂಬುವವರ ಮಧ್ಯೆ ಹಣದ ವಿಚಾರವಾಗಿ ಗಲಾಟೆ ನಡೆದಿತ್ತು. ಈ ಸಂದರ್ಭದಲ್ಲಿ ಮೆಹಬೂಬ್ ಕೂಡ ಅಲ್ಲಿದ್ದಾನೆ. ಇವರಿಬ್ಬರ ಜಗಳ ವಿಕೋಪಕ್ಕೆ ತೆರಳುತ್ತಿದ್ದಂತೆ ಮೆಹಬೂಬ್ ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಮಣಿಕಂಠ, ಕಾರ್ತಿಕ್, ಕಿರಣ ಸೇರಿದಂತೆ 13 ಜನ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...