alex Certify BIG NEWS : ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲು : ನಾಳೆ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲು : ನಾಳೆ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು : ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.

ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಮುಂದೆ ತೆಗೆದುಕೊಳ್ಳಬಹುದಾದ ಕಠಿಣ ನಿಯಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಸದ್ಯ, ಮಂಡ್ಯದ ಆಲೆಮನೆಗೆ ಲೋಕಾಯುಕ್ತ ಡಿವೈಎಸ್ ಪಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಪತ್ತೆಹಚ್ಚಿದ ಆಲೆಮನೆಯಲ್ಲಿ ಲಿಂಗ ಪತ್ತೆ ಮಾತ್ರವಲ್ಲ, ಅಲ್ಲಿ ಹೆಣ್ಣು ಭ್ರೂಣ ಹತ್ಯೆ ಕೂಡ ಮಾಡಲಾಗುತ್ತಿತ್ತು ಅಲೆಮನೆ ಪಕ್ಕದಲ್ಲಿ ಭ್ರೂಣ ಪತ್ತೆ ಜೊತೆ ಹೆಣ್ಣು ಭ್ರೂಣ ಹತ್ಯೆ ಕೂಡ ನಡೆಯುತ್ತಿದ್ದು, ಕಳೆದ 2 ವರ್ಷಗಳಿಂದ ಭ್ರೂಣ ಲಿಂಗ ಪತ್ತೆ ದಂಧೆ ಎಗ್ಗಿಲ್ಲದೇ ನಡೆಯತ್ತಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...