alex Certify ಮಳೆ ನಡುವೆಯೂ ಕರ್ತವ್ಯ ನಿರ್ವಹಿಸಿದ ಪೌರ ಕಾರ್ಮಿಕ ಮಹಿಳೆ; ನೆಟ್ಟಿಗರ ವ್ಯಾಪಕ ಪ್ರಶಂಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ನಡುವೆಯೂ ಕರ್ತವ್ಯ ನಿರ್ವಹಿಸಿದ ಪೌರ ಕಾರ್ಮಿಕ ಮಹಿಳೆ; ನೆಟ್ಟಿಗರ ವ್ಯಾಪಕ ಪ್ರಶಂಸೆ

ಅತಿಯಾದ ಮಳೆಯಿಂದ ಚೆನ್ನೈ ಪ್ರವಾಹ ಪೀಡಿತ ಸ್ಥಿತಿಯಲ್ಲಿ ಥರಗುಟ್ಟಿಹೋಗಿದೆ. ಚೆಂಗಲ್‌ಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರು ಜಿಲ್ಲೆಗಳ ಚೆನ್ನೈ ಮತ್ತು ಉಪನಗರಗಳಲ್ಲಿ ಎಡಬಿಡದೇ ಮಳೆಯಾಗಿದೆ.

ಇಂತಹ ಪರಿಸ್ಥಿತಿಯಲ್ಲೂ ತಮ್ಮ‌ಕರ್ತವ್ಯ ನಿಭಾಯಿಸುತ್ತಿರುವ ಪೌರಕಾರ್ಮಿಕರು, ಪೊಲೀಸರು, ಸಾಮಾಜಿಕ ಕಾರ್ಯಕರ್ತರ ಶ್ರಮ ಜಾಲತಾಣದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

BIG NEWS: ವಿಧಾನಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿಎಂ ಮನವಿ

ಮಳೆಯ ನಡುವೆ ಕಷ್ಟಪಟ್ಟು ಕೆಲಸ ಮಾಡುತ್ತಿರುವ ಮಹಿಳಾ ಪೌರಕಾರ್ಮಿಕರ ಛಾಯಾಚಿತ್ರ ಗಮನ ಸೆಳೆದಿದ್ದು, ಪೌರಕಾರ್ಮಿಕರಿಗೆ ಅಂತರ್ಜಾಲದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ತಮಿಳುನಾಡು ರಾಜಧಾನಿಯ ರಾಯಪೆಟ್ಟಾದ ಬಹುತೇಕ ನಿರ್ಜನ ರಸ್ತೆಯಲ್ಲಿ ಆಕೆ ಕಾಣಿಸಿಕೊಂಡಿದ್ದಾರೆ.

ಮಂಗಳವಾರ ರಾತ್ರಿ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ಟ್ವಿಟರ್ ಬಳಕೆದಾರ, ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ನೈರ್ಮಲ್ಯ ಕಾರ್ಮಿಕರನ್ನು ಗುರುತಿಸಿದೆ. ಭಾರೀ ಮಳೆಯ ನಡುವೆಯೂ ತನ್ನ ಕೆಲಸವನ್ನು ಮಾಡುತ್ತಿದ್ದರು ಎಂದು ಅವರು ಮೈಕ್ರೋಬ್ಲಾಗಿಂಗ್ ವೇದಿಕೆಯಲ್ಲಿ ಬರೆದಿದ್ದಾರೆ.

ಈ ಚಿತ್ರಗಳು ಟ್ವಿಟರ್‌ನಲ್ಲಿ 3,300 ಕ್ಕೂ ಹೆಚ್ಚು ‘ಲೈಕ್‌ಗಳು’ ಮತ್ತು ಸಾವಿರಕ್ಕೂ ಹೆಚ್ಚು ಮೆಚ್ಚುಗೆಯ ಕಾಮೆಂಟ್‌ಗಳನ್ನುಗಳಿಸಿವೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ ಅಧಿಕೃತ ಟ್ವಿಟರ್ ಖಾತೆಯಿಂದ ಮರು ಟ್ವೀಟ್ ಮಾಡಲಾಗಿದೆ.

ಟಿಪಿ ಛತ್ರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜೇಶ್ವರಿ ಅವರು ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವ ದೃಶ್ಯ ಕೂಡ ವ್ಯಾಪಕವಾಗಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...