alex Certify CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ʻಸಚಿವ ಸಂಪುಟ ಸಭೆʼಯ ʻಪ್ರಮುಖ ನಿರ್ಣಯಗಳುʼ ಹೀಗಿವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ʻಸಚಿವ ಸಂಪುಟ ಸಭೆʼಯ ʻಪ್ರಮುಖ ನಿರ್ಣಯಗಳುʼ ಹೀಗಿವೆ

ಬೆಂಗಳೂರು : ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ

  • ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್‌ ಅನ್ನು ಸಂಪರ್ಕಿಸಲು ಮೇಲ್ವೇತುವೆ ನಿರ್ಮಾಣ ಕಾಮಗಾರಿಯನ್ನು 263 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
  • ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಉಚ್ಚಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು 287.55 ಕೋಟಿ ರೂ.ಗಳಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ‘ಬಾಗೇವಾಡಿ ಕೆರೆ ತುಂಬಿಸುವ ಯೋಜನೆಯ 519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ.
  • ರಾಯಚೂರು ತಾಲ್ಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ 158.10 ಕೋಟಿ ರೂ.ಗಳ ಯೋಜನಾ ವರದಿಗೆ ಅನುಮೋದನೆ.
  • ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್‌, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ 499 ಕೋಟಿ ರೂ.ಗಳಿಗೆ ಅಡಳಿತಾತ್ಮಕ ಅನುಮೋದನೆ.
  • ರಾಜ್ಯದ 6 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಅಂದರೆ ಮಹತ್ವಾಕಾಂಕ್ಷಿ ತಾಲ್ಲೂಕುಗಳಲ್ಲಿ (ರಾಯಚೂರು, ಬಳ್ಳಾರಿ, ವಿಜಯಪುರ) 52.81 ಕೋಟಿ ರೂ. ವೆಚ್ಚದಲ್ಲಿ ಮತ್ತು ಮಹತ್ವಾಕಾಂಕ್ಷಿ ತಾಲ್ಲೂಕುಗಳಲ್ಲದ (ಬೆಂಗಳೂರಿನ ಹೊಸೂರು ರಸ್ತೆ, ಕಲಬುರಗಿ, ಮೈಸೂರು) ಸರ್ಕಾರಿ ಕೈಗಾರಿಕಾ ಸಂಸ್ಥೆಗಳಲ್ಲಿ ರೂ. 47.18 ಕೋಟಿ ಗಳ ವೆಚ್ಚದಲ್ಲಿ ಉನ್ನತೀಕರಿಸಲು ಒಪ್ಪಿಗೆ
  • ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂದಲ್ಲಿ 208.45 ಕೋಟಿ ಅಂದಾಜು ಮೊತ್ತದ ಕುಡಿಯುವ ನೀರಿನ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
  • ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕೈ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆ.
  • ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ      ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ ರೂ.142.47 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ.
  • ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ ನಿರ್ಮಾಣವನ್ನು ರೂ.47.32 ಕೋಟಿಗಳ ಅಂದಾಜು ಮೊತ್ತದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
  • 2023-24 ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ’ ಗಳಿಗೆ 60 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ತೀರ್ಮಾನ
  • ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲ ಮೂಲಭೂತ ಸೌಕರ್ಯ ಕಾಮಗಾರಿಗಳ 1,200 ಕೋಟಿ ರೂ. ಗಳ ಕ್ರಿಯಾ ಯೋಜನೆಗೆ ಅನುಮತಿ ನೀಡಿ, ದಿನಾಂಕ: 12-01-2024 ರಂದು ಹೊರಡಿಸಿದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ.
  • ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಲಾಂಡ್ರಿ ಕಟ್ಟಡ, ಎಸ್.ಟಿ.ಪಿ ಉನ್ನತೀಕರಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ.
  • ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ 455 ಕೋಟಿ ರೂ.ಗಳಿಗೆ ಅಡಳಿತಾತ್ಮಕ ಅನುಮೋದನೆ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...