alex Certify ಲಖೀಂಪುರ ಖೇರಿ ಹಿಂಸಾಚಾರ: ಪ್ರತ್ಯಕ್ಷದರ್ಶಿಗಳ ಸಂಪೂರ್ಣ ಮಾಹಿತಿ ನೀಡಿದ ಎಸ್​ಐಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಖೀಂಪುರ ಖೇರಿ ಹಿಂಸಾಚಾರ: ಪ್ರತ್ಯಕ್ಷದರ್ಶಿಗಳ ಸಂಪೂರ್ಣ ಮಾಹಿತಿ ನೀಡಿದ ಎಸ್​ಐಟಿ

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಾಕ್ಷ್ಯಗಳ ಬಗ್ಗೆ ಸುಪ್ರೀಂ ಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಎಸ್​ಐಟಿ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದೆ. ನೂರಾರು ಮಂದಿ ರ್ಯಾಲಿಯಲ್ಲಿ ಭಾಗಿಯಾಗಿದ್ದರೂ ಸಹ ಬೆರಳಣಿಕೆಯ ಸಾಕ್ಷ್ಯಗಳನ್ನು ಮಾತ್ರ ಕೋರ್ಟ್​ ಮುಂದೆ ಹಾಜರುಪಡಿಸಿದ್ದು ಏಕೆ ಎಂದು ಸುಪ್ರೀಂಕೋರ್ಟ್​ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಶ್ನೆ ಮಾಡಿತ್ತು.

ತನಿಖೆಯ ಮುಂದುವರಿದ ಭಾಗವಾಗಿ ಎಸ್​ಐಟಿ ಇಂದು ಪ್ರಕರಣ ಸಂಬಂಧ ಯಾರೆಲ್ಲ ಮುಂದೆ ಬಂದು ಹೇಳಿಕೆಗಳನ್ನು ನೀಡಿದ್ದಾರೆ ಹಾಗೂ ಡಿಜಿಟಲ್​ ಸಾಕ್ಷ್ಯಗಳನ್ನು ಒದಗಿಸಿದ್ದಾರೋ ಆ ಎಲ್ಲ ಪ್ರತ್ಯಕ್ಷದರ್ಶಿಗಳ ಮೊಬೈಲ್​ ಸಂಖ್ಯೆಯನ್ನು ಹಾಗೂ ವಿಳಾಸವನ್ನು ರಿಲೀಸ್​ ಮಾಡಿದೆ. ಅಲ್ಲದೇ ಯಾರು ತಮ್ಮ ವಿವರಗಳು ನಿಗೂಢವಾಗಿ ಇರಲಿ ಎಂದು ಹೇಳಿದ್ದಾರೋ ಆ ಎಲ್ಲಾ ಪ್ರತ್ಯಕ್ಷದರ್ಶಿಗಳ ವಿವರಗಳನ್ನು ಗೌಪ್ಯವಾಗಿ ಇಟ್ಟಿರುವುದಾಗಿಯೂ ಇದೇ ವೇಳೆ ಮಾಹಿತಿ ನೀಡಿದೆ.

ಏನಿದು ಪ್ರಕರಣ..?

ಉತ್ತರಪ್ರದೇಶದ ಲಖೀಂಪುರ ಖೇರಿ ಎಂಬಲ್ಲಿ ಅಕ್ಟೋಬರ್​ 3ರಂದು ಹಿಂಸಾಚಾರ ಸಂಭವಿಸಿತ್ತು. ಈ ಹಿಂಸಾಚಾರದಲ್ಲಿ ಓರ್ವ ಪತ್ರಕರ್ತ ಸೇರಿದಂತೆ 8 ಮಂದಿ ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶಿಶ್​ ಮಿಶ್ರಾ ವಿರುದ್ಧ ರೈತರ ಮೇಲೆ ಕಾರು ಹರಿಸಿದ್ದ ಆರೋಪ ಎದುರಾಗಿತ್ತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...