alex Certify ‘ದೀಪ ಆರುವಾಗ ಜೋರಾಗಿ ಉರಿಯುತ್ತದೆ’ : ಶಾಸಕ ಯತ್ನಾಳ್ ಗೆ ಮುರುಗೇಶ್ ನಿರಾಣಿ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ದೀಪ ಆರುವಾಗ ಜೋರಾಗಿ ಉರಿಯುತ್ತದೆ’ : ಶಾಸಕ ಯತ್ನಾಳ್ ಗೆ ಮುರುಗೇಶ್ ನಿರಾಣಿ ಟಾಂಗ್

ಬೆಂಗಳೂರು : ದೀಪ ಆರುವಾಗ ಜೋರಾಗಿ ಉರಿಯುತ್ತೆ ಅಷ್ಟೇ ಎಂದು ಶಾಸಕ ಯತ್ನಾಳ್ ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಟಾಂಗ್ ನೀಡಿದ್ದಾರೆ.

ದೀಪ ಆರುವಾಗ ಜೋರಾಗಿ ಉರಿಯುತ್ತೆ, ಈಗ ಉರಿಯುತ್ತಿದೆ ಅಷ್ಟೇ, ಇವರದ್ದು ಪಾಪದ ಕೊಡ ತುಂಬಲು ಬಂದಿದೆ. ಇನ್ನು ಬಹಳ ದಿನ ನಡೆಯುವುದಿಲ್ಲ ಎಂದು ಹೇಳಿದರು.

ರಾವಣ ನನ್ನನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದಿದ್ದ. ಆದರೆ ಆತನ ಕಥೆ ಏನಾಯಿತು ಗೊತ್ತಲ್ಲಾ..? ನಾನೇ ಎಲ್ಲ ಅಂದವರಿಗೆ ಏನಾಗಿದೆ? ಇವರ ಕಥೆಯೂ ಹಾಗೇ ಆಗುತ್ತದೆ. ವಿಜಯೇಂದ್ರ ಪ್ರತಿಭೆ ನೋಡಿ ಹೈಕಮಾಂಡ್ ಅಧ್ಯಕ್ಷರನ್ನಾಗಿ ಮಾಡಿದೆ. ಇದನ್ನು ಯತ್ನಾಳ್ಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಮುರುಗೇಶ್ ನಿರಾಣಿ ಕಿಡಿಕಾರಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...