ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 2023-24 ನೇ ಸಾಲಿನ ಬಜೆಟ್ ಮಂಡಿಸಿದ್ದು,
ಬಜೆಟ್ ಕುರಿತು ಮಾಜಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಹಿಂದಿನ ಸರ್ಕಾರ ತೋರಿಸಿ ಕಾಗೆ ಹಾರಿಸೋ ಬಜೆಟ್ ಇದು ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
NEP ಕೈಬಿಡೋದಾಗಿ ಹೇಳಿದ್ದಾರೆ. ಈ ಮೂಲಕ ಇಡೀ ಶಿಕ್ಷಣ ವ್ಯವಸ್ಥೆಯನ್ನ ಅಲುಗಾಡಿಸುವ ಕೆಲಸವನ್ನು ಸಿಎಂ ಮಾಡಿದ್ದಾರೆ. ಯಾವುದೇ ಭಾಗಕ್ಕೆ ನ್ಯಾಯ ಒದಗಿಸದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರ ಏನೂ ಕೊಡಲಿಲ್ಲ, ಹಿಂದಿನ ಸರ್ಕಾರ ಏನೂ ಮಾಡಲಿಲ್ಲ ಎನ್ನುವುದು ಅವರ ಸಾರಾಂಶ ಎಂದು ಹೇಳಿದರು.