
ಫೆಬ್ರವರಿ 27, 2002 ರಂದು, ಗುಜರಾತ್ನ ಗೋಧ್ರಾ ನಿಲ್ದಾಣದ ಸಮೀಪ ಸಬರಮತಿ ಎಕ್ಸ್ಪ್ರೆಸ್ನ S-6 ಕೋಚ್ಗೆ ಬೆಂಕಿ ಹಚ್ಚಿ, ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ 59 ಯಾತ್ರಾರ್ಥಿಗಳನ್ನು ಕೊಂದ ದುರಂತ ಘಟನೆಯು ಚಿತ್ರದ ಮುಖ್ಯ ವಿಷಯವಾಗಿದೆ. ಈ ಘಟನೆಯ ಪರಿಣಾಮವಾಗಿ ಆ ವರ್ಷ ಗುಜರಾತ್ನಲ್ಲಿ ಸರಣಿ ಹಿಂಸಾತ್ಮಕ ಗಲಭೆಗಳು ಭುಗಿಲೆದ್ದಿದ್ದವು.
ಸಾರ್ವಜನಿಕರಿಗೆ ಸತ್ಯವನ್ನು ಹೇಳಿದ್ದಕ್ಕಾಗಿ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಚಲನಚಿತ್ರವನ್ನು ಶ್ಲಾಘಿಸಿದ್ದಾರೆ. ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಸತ್ಯವನ್ನು ಬಹಿರಂಗಪಡಿಸುವುದು ಪ್ರಯೋಜನಕಾರಿ ಎಂದು ಅವರು ಎಕ್ಸ್ನಲ್ಲಿ ಹಾಕಿರುವ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ಗೃಹ ಸಚಿವ ಅಮಿತ್ ಶಾ ಚಿತ್ರಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದರು.
ವಿಕ್ರಾಂತ್ ಮಾಸ್ಸೆ, ರಾಶಿ ಖನ್ನಾ ಮತ್ತು ರಿಧಿ ಡೋಗ್ರಾ ನಟಿಸಿರುವ ʼದಿ ಸಬರಮತಿ ರಿಪೋರ್ಟ್ʼ ಚಿತ್ರವನ್ನು ಎ ವಿಕಿರ್ ಫಿಲ್ಮ್ಸ್ ಪ್ರಸ್ತುತಪಡಿಸಿದೆ ಮತ್ತು ಬಾಲಾಜಿ ಟೆಲಿಫಿಲ್ಮ್ಸ್ ಲಿಮಿಟೆಡ್ನ ಒಂದು ಅಂಗವಾದ ಬಾಲಾಜಿ ಮೋಷನ್ ಪಿಕ್ಚರ್ಸ್ ನಿರ್ಮಿಸಿದೆ. ಚಿತ್ರವನ್ನು ಧೀರಜ್ ಸರ್ನಾ ನಿರ್ದೇಶಿಸಿದ್ದಾರೆ ಮತ್ತು ಶೋಭಾ ಕಪೂರ್, ಏಕ್ತಾ ಆರ್ ಕಪೂರ್, ಅಮುಲ್ ವಿ ಮೋಹನ್ ಮತ್ತು ಅಂಶುಲ್ ಮೋಹನ್ ನಿರ್ಮಿಸಿದ್ದಾರೆ.
Well said. It is good that this truth is coming out, and that too in a way common people can see it.
A fake narrative can persist only for a limited period of time. Eventually, the facts will always come out! https://t.co/8XXo5hQe2y
— Narendra Modi (@narendramodi) November 17, 2024
No matter how hard a powerful ecosystem tries, it cannot keep the truth hidden in darkness forever.
The film #SabarmatiReport defies the ecosystem with unparalleled courage and exposes the truth behind the fateful episode to broad daylight. https://t.co/AnVsuCSNwi
— Amit Shah (@AmitShah) November 18, 2024