alex Certify Raichuru Crime : ತಂಗಿಗೆ ಮೆಸೇಜ್ ಮಾಡ್ಬೇಡ ಎಂದು ವಾರ್ನಿಂಗ್ ಕೊಟ್ಟ ಅಣ್ಣನನ್ನೇ ಹತ್ಯೆ ಮಾಡಿದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Raichuru Crime : ತಂಗಿಗೆ ಮೆಸೇಜ್ ಮಾಡ್ಬೇಡ ಎಂದು ವಾರ್ನಿಂಗ್ ಕೊಟ್ಟ ಅಣ್ಣನನ್ನೇ ಹತ್ಯೆ ಮಾಡಿದ ದುಷ್ಕರ್ಮಿಗಳು

ರಾಯಚೂರು : ತಂಗಿಗೆ ಮೆಸೇಜ್ ಮಾಡ್ಬೇಡ ಎಂದು ಬುದ್ದಿ ಮಾತು ಹೇಳಿದ ಅಣ್ಣನಿಗೆ ದುಷ್ಕರ್ಮಿಗಳು ‘ಚಾಕು’ ಇರಿದು ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ದೇವರಾಜ್ (23) ಎಂದು ಗುರುತಿಸಲಾಗಿದ್ದು, ಆರೋಪಿಗಳಾದ ಬಸವರಾಜ್ ಹಾಗೂ ಹನುಮಂತ್ ಎಂಬುವವರ ವಿರುದ್ಧ ದೂರು ದಾಖಲಾಗಿದೆ.

ಆರೋಪಿ ಬಸವರಾಜ್ ಮೃತ ದೇವರಾಜ್ ತಂಗಿಯನ್ನು ಲವ್ ಮಾಡುವಂತೆ ಕಿರುಕುಳ ನೀಡುತ್ತಿದ್ದನು. ಅಲ್ಲದೇ ಕಂಡ ಕಂಡಲ್ಲಿ ದೇವರಾಜ್ ತಂಗಿಯನ್ನು ಪೀಡಿಸಿ ಕಿರುಕುಳ ನೀಡುತ್ತಿದ್ದನು. ಅಲ್ಲದೇ ದೇವರಾಜ್ ತಂಗಿಗೆ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇದರಿಂದ ಕೆರಳಿದ ದೇವರಾಜ್ ಆರೋಪಿ ಬಸವರಾಜ್ ಜೊತೆ ಗಲಾಟೆ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ಹೋಗಿದ್ದು ಆರೋಪಿ ಬಸವರಾಜ್,  ದೇವರಾಜ್ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...