alex Certify ಅಶೋಕ್ ಅವರ ʻಸಂತೋಷʼದ ʻವ್ಯಾಲಿಡಿಟಿʼ ಶೀಘ್ರದಲ್ಲೇ ಮುಗಿಯುವ ಸೂಚನೆ ಸಿಕ್ಕಿದೆ : ಕಾಂಗ್ರೆಸ್ ಲೇವಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಶೋಕ್ ಅವರ ʻಸಂತೋಷʼದ ʻವ್ಯಾಲಿಡಿಟಿʼ ಶೀಘ್ರದಲ್ಲೇ ಮುಗಿಯುವ ಸೂಚನೆ ಸಿಕ್ಕಿದೆ : ಕಾಂಗ್ರೆಸ್ ಲೇವಡಿ

ಬೆಂಗಳೂರು : ವಿರೋಧ ಪಕ್ಷದ ನಾಯಕನಿಗೆ ಈ ಪರಿ ವಿರೋಧ ಸೃಷ್ಟಿಯಾಗಿದೆ ಎಂದರೆ ಅಶೋಕ್ ಅವರ ಸಂತೋಷದ ವ್ಯಾಲಿಡಿಟಿ ಶೀಘ್ರದಲ್ಲೇ ಮುಗಿಯುವ ಸೂಚನೆ ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್‌ ಘಟಕ ವ್ಯಂಗ್ಯವಾಡಿದೆ. 

ಈ ಕುರಿತು ಎಕ್ಸ್‌ ನಲ್ಲಿ ಲೇವಡಿ ಮಾಡಿರುವ ಕಾಂಗ್ರೆಸ್‌, ವಿರೋಧ ಪಕ್ಷದ ನಾಯಕನ ಕಚೇರಿಯಿಂದ ಅಶೋಕ್ ಹೆಸರನ್ನು ತೆಗೆದರಷ್ಟೇ ಕಚೇರಿಗೆ ಹೋಗುವೆ ಎಂದು ಬಿಜೆಪಿ ಶಾಸಕ ಪಟ್ಟು ಹಿಡಿದಿದ್ದಾರೆ. ವಿರೋಧ ಪಕ್ಷದ ನಾಯಕನಿಗೆ ಈ ಪರಿ ವಿರೋಧ ಸೃಷ್ಟಿಯಾಗಿದೆ ಎಂದರೆ ಅಶೋಕ್ ಅವರ ಸಂತೋಷದ ವ್ಯಾಲಿಡಿಟಿ ಶೀಘ್ರದಲ್ಲೇ ಮುಗಿಯುವ ಸೂಚನೆ ಅಲ್ಲವೇ ಬಿಜೆಪಿ? ಯಾರು ಶತ್ರುಗಳು, ಯಾರು ಮಿತ್ರರು ಎಂದು ಸ್ವತಃ ಬಿಜೆಪಿಯವರಿಗೇ ಗೊಂದಲವಾಗುತ್ತಿದೆ ಎಂದು ಹೇಳಿದೆ.

ಆ’ಶೋಕ’ ಗೀತೆ!

◆ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಕ್ಕೆ ಬಿಜೆಪಿ ಶಾಸಕ ಅಭಿನಂದಿಸಲು ಒಪ್ಪಲಿಲ್ಲ.

◆ ಸಭಾತ್ಯಾಗ ಮಾಡಿದರೆ ಬಿಜೆಪಿ ಶಾಸಕರೇ ಕುರ್ಚಿ ಬಿಟ್ಟು ಏಳಲಿಲ್ಲ.

◆ ಶಾಸಕಾಂಗ ಸಭೆಗೆ ಬರುವುದಿಲ್ಲ ಎಂದು ಬಿಜೆಪಿ ಶಾಸಕರಿಂದಲೇ ಘೇರಾವ್.

◆ ವಿರೋಧ ಪಕ್ಷದ ನಾಯಕನ ಕೊಠಡಿಗೆ ಬರಲು ಒಪ್ಪದ ಬಿಜೆಪಿ ಶಾಸಕ.

◆ ಸಭಾತ್ಯಾಗ ಮಾಡಿರುವುದಕ್ಕೆ ಸ್ವಪಕ್ಷದ ಶಾಸಕರಿಂದಲೇ ತರಾಟೆ.

◆ ಬಕೆಟ್ ರಾಜಕಾರಣಿ ಎಂದು ಬಿಜೆಪಿಗರಿಂದಲೇ ಬಿರುದು.

◆ ವಿರೋಧ ಪಕ್ಷದ ನಾಯಕ ಎನ್ನುವುದನ್ನು ಮರೆತು ಸ್ವಪಕ್ಷದ ನಾಯಕರಿಂದಲೇ ಸದನದಲ್ಲಿ ಮಾತನಾಡಲು ಅಡ್ಡಿ.

ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿಯಾಗಿರುವಾಗ ಅಶೋಕರ ಶೋಕ ರಾಗವನ್ನು ಕೇಳುವವರು ಯಾರು? ಎಂದು ಪ್ರಶ್ನಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...