alex Certify BREAKING : ‘ಆಪರೇಷನ್ ಹಸ್ತ’ದ ಬೆನ್ನಲ್ಲೇ ಕುತೂಹಲ ಮೂಡಿಸಿದ CM ಸಿದ್ದರಾಮಯ್ಯ -M.P ರೇಣುಕಾಚಾರ್ಯ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಆಪರೇಷನ್ ಹಸ್ತ’ದ ಬೆನ್ನಲ್ಲೇ ಕುತೂಹಲ ಮೂಡಿಸಿದ CM ಸಿದ್ದರಾಮಯ್ಯ -M.P ರೇಣುಕಾಚಾರ್ಯ ಭೇಟಿ

ಬೆಂಗಳೂರು : ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ ಭೇಟಿ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಬಹಳ ಕುತೂಹಲ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಭೇಟಿ ಮಾಡಿದ ರೇಣುಕಾಚಾರ್ಯ ಸುಮಾರು 20 ನಿಮಿಷಗಳ ಕಾಲ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕ್ಷೇತ್ರದ ಸಂಬಂಧ ಚರ್ಚೆ ನಡೆಸಿ ತೆರಳಿದ್ದಾರೆ ಎನ್ನಲಾಗಿದ್ದು, ಏನೇನು ಮಾತುಕತೆ ನಡೆಸಿದ್ದಾರೆ ಎಂಬ ಕುತೂಹಲವಿದೆ.

ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ಕಾಂಗ್ರೆಸ್ ಗಾಳಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಪರಮಾಪ್ತ ಎಂ.ಪಿ ರೇಣುಕಾಚಾರ್ಯ ಬಿದ್ರಾ..? ಎಂಬ ಗುಸು ಗುಸು ಕೇಳಿಬರುತ್ತಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...