alex Certify ನಾಯಕತ್ವ ಬದಲಾವಣೆ ವಿಚಾರ ಕುರಿತಂತೆ ಡಿಸಿಎಂ ಲಕ್ಷ್ಮಣ ಸವದಿ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ ವಿಚಾರ ಕುರಿತಂತೆ ಡಿಸಿಎಂ ಲಕ್ಷ್ಮಣ ಸವದಿ ಮಹತ್ವದ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಸಿಎಂ ಬದಲಾವಣೆ ಊಹಾಪೋಹಗಳಿಗೆ ಡಿಸಿಎಂ ಲಕ್ಷ್ಮಣ ಸವದಿ ತೆರೆ ಎಳೆದಿದ್ದಾರೆ. ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡುವ ಪ್ರಶ್ನೆಯೇ ನಮ್ಮಲ್ಲಿ ಮೂಡಿಲ್ಲ ಎಂದು ಹೇಳಿದ್ದಾರೆ.

ರಾಯಚೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಸವದಿ, ಊಹಾಪೋಹಗಳಿಗೆ ರೆಕ್ಕೆ – ಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಮಾಡಲಾಗಿದೆ. ಸದ್ಯ ನಮ್ಮ ಮುಂದೆ ಕೊರೊನಾ ನಿಯಂತ್ರಣ ಮಾಡುವ ಸವಾಲು ಮಾತ್ರ ಇದೆ. ಇದನ್ನ ಹೊರತುಪಡಿಸಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುತ್ತೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಇದು ಜನರನ್ನ ಕಷ್ಟದಿಂದ ಹೊರತರುವ ಸಂದರ್ಭವಾಗಿದೆ ಈ ಸಂಕಷ್ಟದ ಸನ್ನಿವೇಶಗಳಲ್ಲಿ ಈ ರೀತಿಯ ಅನಗತ್ಯ ಹೇಳಿಕೆಗಳನ್ನ ನೀಡಬೇಡಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...