ನವದೆಹಲಿ : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ತಾರತಮ್ಯ ವಿರೋಧಿಸಿ ಕನ್ನಡಿಗರ ಹಿತಕಾಪಡುವ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ನೀರಾವರಿ ಯೋಜನೆಗಳಿಗೆ ಅನುಮತಿ ನಿರಾಕರಣೆ, ವಿಶೇಷ ಅನುದಾನಕ್ಕೆ ಅಡ್ಡಗಾಲು ಹಾಕಿ ಕನ್ನಡಿಗರಿಗೆ ಮೇಲೆ ಸಾಲು ಸಾಲು ದ್ರೋಹ ಎಸಗಿದೆ. ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಇಂದು ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಿ, ನಮ್ಮ ನ್ಯಾಯಯುತ ಪಾಲು ಮತ್ತು ಹಕ್ಕುಗಳಿಗಾಗಿ ಧ್ವನಿಯೆತ್ತುತ್ತಿದ್ದೇವೆ ಎಂದರು.
ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ ಹಣವನ್ನು ಕೂಡ ಕೇಂದ್ರ ಸರ್ಕಾರ ನೀಡಿಲ್ಲ, ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಾಗಿ ತೆರಿಗೆ ಹೋಗುತ್ತಿದೆ, ಆದರೆ ಅದನ್ನು ಕೂಡ ನೀಡುತ್ತಿಲ್ಲ ಎಂದು ಹೇಳಿದ್ದಾರೆ.