alex Certify ಮತ್ತೆ ಬಾಲ ಬಿಚ್ಚಿದ ನಿಷೇಧಿತ ಪಿಎಫ್ಐ: ಸ್ವಾಮೀಜಿಗೆ ಬೆದರಿಕೆ; ಕೇಂದ್ರದಿಂದ ‘ವೈ ಕೆಟಗರಿ’ ಭದ್ರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಬಾಲ ಬಿಚ್ಚಿದ ನಿಷೇಧಿತ ಪಿಎಫ್ಐ: ಸ್ವಾಮೀಜಿಗೆ ಬೆದರಿಕೆ; ಕೇಂದ್ರದಿಂದ ‘ವೈ ಕೆಟಗರಿ’ ಭದ್ರತೆ

ಬೆಂಗಳೂರು: ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಮತ್ತೆ ಬಾಲ ಬಿಚ್ಚಿದ್ದಾರೆ. ಯತಿರಾಜರಾಮಾನುಜ ಜೀಯರ್ ಸ್ವಾಮೀಜಿಗೆ ಜೀವ ಬೆದರಿಕೆ ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಯದುಗಿರಿ ಮಠದ ಪೀಠಾಧಿಪತಿ ಯತಿರಾಜರಾಮಾನುಜ ಜೀಯರ್ ಸ್ವಾಮೀಜಿಗೆ ಜೀವಬೆದರಿಕೆ ಹಾಕಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಮಾನುಜಾಚಾರ್ಯರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ನಿರಂತರ ಬೆದರಿಕೆ ಕರೆ ಬರುತ್ತಿವೆ. ಇಂಟರ್ನೆಟ್ ಕರೆ ಮಾಡಿ ದುಷ್ಕರ್ಮಿಗಳು ಬೆದರಿಕೆ ಹಾಕುತ್ತಿದ್ದಾರೆ. ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಸ್ವಾಮೀಜಿಗೆ ವಿಶೇಷ ಭದ್ರತೆ ಕಲ್ಪಿಸಲಾಗಿದೆ.

ಕೇಂದ್ರ ಗೃಹ ಇಲಾಖೆ ಸ್ವಾಮೀಜಿಗೆ ವೈ ಕೆಟಗರಿ ಭದ್ರತೆ ನೀಡಿದೆ. ಬೆಂಗಳೂರಿನ ಮಲ್ಲೇಶ್ವರಂ ಶಾಖಾ ಮಠದಲ್ಲಿ ಸ್ವಾಮೀಜಿ ವಾಸ್ತವ್ಯ ಹೋಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...