alex Certify BREAKING: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಮನೆ ಗೋಡೆ ಕುಸಿದು ಮೂವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಮನೆ ಗೋಡೆ ಕುಸಿದು ಮೂವರು ಸಾವು

ಹಾವೇರಿ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ:.

ಮನೆ ಗೋಡೆ ಕುಸಿದು ಮಹಿಳೆ ಹಾಗೂ ಇಬ್ಬರು ಪುಟ್ಟ ಮಕ್ಕಳು ಸಾವನ್ನುಪ್ಪಿದ್ದಾರೆ. ಚನ್ನಮ್ಮ(30), ಮುತ್ತು ಮಕ್ಕಳಾದ ಅಮೂಲ್ಯ ಮತ್ತು ಅನನ್ಯಾ ಮೃತಪಟ್ಟವರು ಎಂದು ಹೇಳಲಾಗಿದೆ. ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ದಿನ ನಿರಂತರ ಸುರಿದ ಮಳೆಯಿಂದ ತೇವಗೊಂಡಿದ್ದ ಮನೆಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ಮಲಗಿದ್ದ ಆರು ಜನರ ಮೇಲೆ ಗೋಡೆ ಬಿದ್ದು ದುರಂತ ಸಂಭವಿಸಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೃದ್ಧೆ ಯಲ್ಲಮ್ಮ, ಪುತ್ರ ಮುತ್ತು, ಸೊಸೆ ಸುನಿತಾ ಗಾಯಗೊಂಡಿದ್ದಾರೆ. ಇಂದು ನಸುಕಿನ ಜಾವ 3:30ಕ್ಕೆ ದುರ್ಘಟನೆ ಸಂಭವಿಸಿದೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...