alex Certify ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಮೂವರು ವಿದ್ಯಾರ್ಥಿಗಳ ವಿಚಾರಣೆ ಇಂದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಮೂವರು ವಿದ್ಯಾರ್ಥಿಗಳ ವಿಚಾರಣೆ ಇಂದು

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಮೂವರು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಮಾರತ್ ಹಳ್ಳಿ ಠಾಣೆ ಪೊಲೀಸರು ಮೂವರಿಗೆ ಸೂಚನೆ ನೀಡಿದ್ದಾರೆ. ಉದ್ದೇಶಪೂರ್ವಕವಾಗಿ ಕೂಗಿಲ್ಲ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ನಿನ್ನೆ ವಿಚಾರಣೆ ನಡೆಸಿ ಮೂವರನ್ನು ಪೊಲೀಸರು ವಾಪಸ್ ಕಳುಹಿಸಿದ್ದರು. ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಮೂವರಿಗೆ ಸೂಚನೆ ನೀಡಲಾಗಿದೆ.

ಮಾರತಹಳ್ಳಿಯ ನ್ಯೂ ಹಾರಿಜನ್ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯನ್, ರಿಯಾ ರವೀಂದ್ರನ್, ದಿನಕರ್ ಎಂಬುವರು ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ಈ ವಿಡಿಯೋವನ್ನು ಮತ್ತೊಬ್ಬ ವಿದ್ಯಾರ್ಥಿ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...