ಬೀದರ್: ತೋರ್ಣ ಗ್ರಾಮದ ಬಳಿಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ತೋರ್ಣಾ ಗ್ರಾಮದಲ್ಲಿ ಘಟನೆ ನಡೆದಿದೆ.
ಚಿಮ್ಮೇಗಾಂವ್ ನ ಕಮಲಾಬಾಯಿ(30), ವಿಠಲ(28) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿಗೆ ಹೋಗಿದ್ದ ವೇಳೆ ಸಿಡಿಲು ಬಡಿದು ದುರಂತ ಸಂಭವಿಸಿದೆ. ಕುಸನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.