alex Certify ರಾಜಕೀಯ ದ್ವೇಷಕ್ಕೆ ಹೆಸರಾದ ಬಂಗಾಳದಲ್ಲಿ ಮತ್ತೊಂದು ಮರ್ಡರ್: ತಡರಾತ್ರಿ ಫೈರಿಂಗ್ ನಲ್ಲಿ ಟಿಎಂಸಿ ಮುಖಂಡನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ದ್ವೇಷಕ್ಕೆ ಹೆಸರಾದ ಬಂಗಾಳದಲ್ಲಿ ಮತ್ತೊಂದು ಮರ್ಡರ್: ತಡರಾತ್ರಿ ಫೈರಿಂಗ್ ನಲ್ಲಿ ಟಿಎಂಸಿ ಮುಖಂಡನ ಹತ್ಯೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಟಿಎಂಸಿ ಮುಖಂಡ ಮಹರಮ್ ಶೇಖ್ ಕೊಲೆಯಾದವರು. ತಡರಾತ್ರಿ ಅವರ ಮನೆಗೆ ದಾಳಿ ಮಾಡಿದ ದುಷ್ಕರ್ಮಿಗಳು ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದು ಮಹರಮ್ ಶೇಖ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭಾನುವಾರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಕೊಲೆ ಹಿಂದಿನ ಉದ್ದೇಶ ತಿಳಿಯಲು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...