alex Certify ಇಂದು ಪುನೀತ್ ರಾಜ್ ಕುಮಾರ್ ಜನ್ಮದಿನ ; ಅಪ್ಪು ಸಮಾಧಿ ಬಳಿ ಹರಿದು ಬಂದ ಜನಸಾಗರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಪುನೀತ್ ರಾಜ್ ಕುಮಾರ್ ಜನ್ಮದಿನ ; ಅಪ್ಪು ಸಮಾಧಿ ಬಳಿ ಹರಿದು ಬಂದ ಜನಸಾಗರ

ಬೆಂಗಳೂರು : ಇಂದು ಅಭಿಮಾನಿಗಳ ಹೃದಯಗಳಲ್ಲಿ ಸದಾ ನೆಲೆಸಿರುವ ಪರಮಾತ್ಮ, ನಗುಮುಖದ ಸರದಾರ, ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನ.

ಪುನೀತ್ ರಾಜ್ ಕುಮಾರ್ ಜನ್ಮದಿನ ಹಿನ್ನೆಲೆ ಅಪ್ಪು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಇಂದು ಮುಂಜಾನೆಯಿಂದಲೇ ಅಭಿಮಾನಿಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸಮಾಧಿಗೆ ತೆರಳಿ ದರ್ಶನ ಪಡೆಯುತ್ತಿದ್ದಾರೆ.

ಮಧ್ಯರಾತ್ರಿಯಿಂದಲೇ ಬರ್ತಡೆ ಸೆಲೆಬ್ರೇಷನ್ ಶುರು ಆಗಿದ್ದು, ಅಭಿಮಾನಿಗಳಿಂದ ಅನ್ನದಾನ,ರಕ್ತದಾನ, ನೇತ್ರದಾನ ಶಿಬಿರ ಕೂಡ ನೆರವೇರಲಿದೆ. ಅಪ್ಪು ಸಮಾಧಿ ಬಳಿ ಹಲವು ರೀತಿಯ ಕಾರ್ಯಕ್ರಮಗಳು ಳಿ ಪ್ರಾರಂಭವಾಗಿದ್ದು, ಬೆಳಗ್ಗೆ ಹತ್ತು ಗಂಟೆಗೆ ಕುಟುಂಬದಿಂದ ಸಮಾಧಿ ಪೂಜೆ ನೆರವೇರಲಿದೆ.

ಕನ್ನಡದ ಖ್ಯಾತ ಚಲನಚಿತ್ರ ನಟ, ಸಾಮಾಜಿಕ, ಪರಿಸರ ಕಾಳಜಿಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಿ, ಸದಾ ಹಸನ್ಮುಖಿಯಾಗಿದ್ದ ನಮ್ಮೆಲ್ಲರ ಅಪ್ಪು ಕರ್ನಾಟಕ ರತ್ನ ಡಾ. ಪುನೀತ್ ರಾಜ್ಕುಮಾರ್ ಅವರ ಜನ್ಮದಿನದ ಸ್ಮರಣೆ ಇಂದು ರಾಜ್ಯಾದ್ಯಂತ ನಡೆಯಲಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...