alex Certify ಟೋಲ್ ಆಪರೇಟರ್ ಮೇಲೆಯೇ ಹರಿದ ಕ್ಯಾಂಟರ್: ವ್ಯಕ್ತಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೋಲ್ ಆಪರೇಟರ್ ಮೇಲೆಯೇ ಹರಿದ ಕ್ಯಾಂಟರ್: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಶುಲ್ಕ ಪಾವತಿಸದೇ ತೆರಳುತ್ತಿದ್ದ ಕ್ಯಾಂಟರ್ ಲಾರಿ ತಡೆಯಲು ಹೋಗಿ ಟೋಲ್ ಆಪರೇಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ನವಯುಗ ಟೋಲ್ ನಲ್ಲಿ ನಡೆದಿದೆ.

ನಾಗರಾಜ್ (25) ಮೃತ ಟೋಲ್ ಆಪರೇಟರ್. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕ್ಯಾಂಟರ್ ಚಾಲಕನೊಬ್ಬ ಟೋಲ್ ಶುಲ್ಕ ಕಟ್ಟದೇ ಹೋಗುತ್ತಿದ್ದ. ಈ ವೇಳೆ ಕ್ಯಾಂಟರ್ ಲಾರಿ ತಡೆಯಲು ನಾಗರಾಜ್ ಮುಂದಾಗಿದ್ದಾರೆ. ಹಿಂಬದಿಯಿಂದ ಬಂದ ಕ್ಯಾಂಟರ್ ಚಾಲಕ ಲಾರಿಯನ್ನು ನಾಗರಾಜ್ ಮೇಲೆಯೇ ಹತ್ತಿಸಿಕೊಂಡು ಹೋಗಿದ್ದಾನೆ.

ನಾಗರಾಜ್ ರಸ್ತೆಯಲ್ಲಿಯೇ ಸಾವು-ಬದುಕಿನ ನಡುವೆ ಹೋರಾಡಿ ಪ್ರಾಣಬಿಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಸಂಚಾರಿ ಪೊಲೀಸರು, ತಡರಾತ್ರಿ ತಪ್ಪಿಸಿಕೊಂಡು ಪರಾರಿಯಾಗಿದ್ದ ಕ್ಯಾಂಟರ್ ಚಾಲಕನನ್ನು ಹುಬ್ಬಳ್ಳಿಯಲ್ಲಿ ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...