alex Certify ಮೂವರು ಉಗ್ರರು ಫಿನಿಶ್: ಎಲ್ಇಟಿ ಭಯೋತ್ಪಾದಕ ಸೇರಿ ಮೂವರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂವರು ಉಗ್ರರು ಫಿನಿಶ್: ಎಲ್ಇಟಿ ಭಯೋತ್ಪಾದಕ ಸೇರಿ ಮೂವರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ಭಯೋತ್ಪಾದಕ ಸೇರಿ ಮೂವರನ್ನು ಹತ್ಯೆ ಮಾಡಲಾಗಿದೆ.

ಎಲ್ಇಟಿ ಉನ್ನತ ಸ್ಥಾನದಲ್ಲಿದ್ದ ಮುದಾಸಿರ್ ಪಂಡಿತ್ ಸೇರಿದಂತೆ ಮೂವರು ಭಯೋತ್ಪಾದಕರು ಮೃತಪಟ್ಟಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯ ಸೋಪೂರ್ ಪ್ರದೇಶದಲ್ಲಿ ರಾತ್ರಿ ಎನ್ಕೌಂಟರ್ ನಡೆಸಲಾಗಿದೆ ಎಂದು ಕಾಶ್ಮೀರ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯಕುಮಾರ್ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಎಲ್ಇಟಿ ಉನ್ನತ ಸ್ಥಾನದಲ್ಲಿದ್ದ ಮುದಾಸಿತ್ ಪಂಡಿತ್ ಮೃತಪಟ್ಟಿದ್ದಾನೆ. ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದು ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಭಾನುವಾರ ತಡರಾತ್ರಿ ಎನ್ಕೌಂಟರ್ ಆರಂಭವಾಗಿತ್ತು. ಇತ್ತೀಚೆಗೆ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್ ಗಳು ಮತ್ತು ಇಬ್ಬರು ನಾಗರೀಕರ ಹತ್ಯೆಯಲ್ಲಿ ಬೇಕಾಗಿದ್ದ ಭಯೋತ್ಪಾದಕ ಮುದಾಸಿರ್ ಪಂಡಿತ್ ಎನ್ಕೌಂಟರ್ ನಲ್ಲಿ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...