alex Certify BREAKING : ತುಮಕೂರಿನಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಒಂದೇ ಕುಟುಂಬದ ಐವರು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಒಂದೇ ಕುಟುಂಬದ ಐವರು ಆತ್ಮಹತ್ಯೆ

ತುಮಕೂರು : ತುಮಕೂರಿನಲ್ಲಿ ಘೋರ ದುರಂತ ನಡೆದಿದ್ದು, ನೇಣು ಬಿಗಿದುಕೊಂಡು ಒಂದೇ ಕುಟುಂಬದ ಐವರು ಆತ್ಮಹತ್ಯೆ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ.

ಮೃತರು ಗರೀಬ್ ಸಾಬ್, ಸುಮಯ್ಯ, ಹಜೀನಾ, ಮೊಹ್ಮದ್ ಶಬೀರ್, ಮೊಹಮದ್ ಮುನೀರ್ ಎಂದು ತಿಳಿದುಬಂದಿದೆ.

ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ತಿಲಕ್ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಗಂಡ-ಹೆಂಡತಿ ಹಾಗೂ ಅವರ ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಮೃತರು ಶಿರಾ ತಾಲ್ಲೂಕು ಲಕ್ಕನಹಳ್ಳಿಯವರು ಎಂದು ಗುರುತಿಸಲಾಗಿದೆ. ಇಬ್ಬರ ದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಇದ್ದವು. ಮೂವರು ಮಕ್ಕಳ ಮೃತದೇಹ ಹಾಸಿಗೆಯಲ್ಲಿದ್ದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...