alex Certify ನಾಗರ ಪಂಚಮಿ ದಿನವೇ ಘೋರ ದುರಂತ: ಹಾವು ಕಚ್ಚಿ ಬಾಣಂತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಗರ ಪಂಚಮಿ ದಿನವೇ ಘೋರ ದುರಂತ: ಹಾವು ಕಚ್ಚಿ ಬಾಣಂತಿ ಸಾವು

ಶಿವಮೊಗ್ಗ: ನಾಗರ ಪಂಚಮಿ ಹಬ್ಬದ ದಿನವೇ ಹಾವು ಕಚ್ಚಿ ಬಾಣಂತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ.

22 ವರ್ಷದ ರಂಜಿತಾ ಮೃತಪಟ್ಟವರು. ಗದ್ದೆಯಲ್ಲಿ ಮೇವು ತರಲು ಹೋಗಿದ್ದ ವೇಳೆ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಮೇವು ತರುವಾಗ ಹಾವು ರಂಜಿತಾ ಅವರಿಗೆ ಕಚ್ಚಿದೆ. ಆದರೆ ಅವರಿಗೆ ತಕ್ಷಣಕ್ಕೆ ಗೊತ್ತಾಗಿಲ್ಲ. ಕೆಲ ಸಮಯದ ಬಳಿಕ ಹಾವು ಕಚ್ಚಿರುವುದು ಗೊತ್ತಾಗಿದೆ. ಕುಟುಂಬದವರು ಹೋಗಿ ನೋಡಿದಾಗ ರಂಜಿತಾ ಗದ್ದೆಯಲ್ಲಿ ಕುಸಿದು ಬಿದ್ದಿದ್ದರು.

ಕೂಡಲೇ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ರಂಜಿತಾ ಅವರಿಗೆ ಒಂದು ವರ್ಷದ ಹೆಣ್ಣು ಮಗು, ನಾಲ್ಕು ತಿಂಗಳ ಹಸುಗೂಸು ಇದೆ. ರಂಜಿತಾ ಮೃತಪಟ್ಟ ಹಿನ್ನಲೆಯಲ್ಲಿ ಶವಗಾರದ ಬಳಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...