alex Certify ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರಿಗೆ ಗನ್ ಮ್ಯಾನ್ ಆಗಿರುವ ಪೊಲೀಸ್ ಸಿಬ್ಬಂದಿ ನಾಗರಾಜ್ ಭಾನುವಾರ ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳಲು ಕಾಚಿಗುಡ ಎಕ್ಸ್ಪ್ರೆಸ್ ರೈಲು ಹತ್ತಿದ್ದಾರೆ. ಪ್ರಯಾಣದ ಮಧ್ಯೆ ಶೌಚಾಲಯಕ್ಕೆ ತೆರಳಿದ್ದ ಅವರು ಇಲಾಖೆಯ ಸರ್ವಿಸ್ ಪಿಸ್ತೂಲ್ ಅನ್ನು ಶೌಚಾಲಯದ ಕಪಾಟಿನಲ್ಲಿ ಇಟ್ಟಿದ್ದಾರೆ. ಅದನ್ನು ತೆಗೆದುಕೊಳ್ಳದೆ ಮರೆತು ಹೊರಗೆ ಬಂದಿದ್ದಾರೆ.

ಬೇರೆ ಪ್ರಯಾಣಿಕ ಶೌಚಾಲಯಕ್ಕೆ ಹೋದ ವೇಳೆ ಕಪಾಟಿನಲ್ಲಿ ಪಿಸ್ತೂಲ್ ನೋಡಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಲ್ಲಾ ಪೊಲೀಸ್ ಕಂಟ್ರೋಲ್ ರೂಂಗಳಿಗೆ ಮಾಹಿತಿ ನೀಡಲಾಗಿದೆ. ಕೊನೆಗೆ ಪಿಸ್ತೂಲ್ ಮಂಡ್ಯದ ಪೊಲೀಸ್ ಸಿಬ್ಬಂದಿಗೆ ಸೇರಿದ್ದು ಎನ್ನುವುದು ಗೊತ್ತಾಗಿದೆ. ಅದನ್ನು ವಶಕ್ಕೆ ಪಡೆದ ರೈಲ್ವೆ ಪೊಲೀಸರು ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ವರದಿ ನೀಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...