alex Certify BREAKING : ರಿಯಲ್ ಸ್ಟಾರ್ ‘ಉಪೇಂದ್ರ’ಗೆ ಮತ್ತೆ ಸಂಕಷ್ಟ : ಬಂಧನಕ್ಕೆ ಪಟ್ಟು ಹಿಡಿದ ‘ಕರ್ನಾಟಕ ರಣಧೀರ ಪಡೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಿಯಲ್ ಸ್ಟಾರ್ ‘ಉಪೇಂದ್ರ’ಗೆ ಮತ್ತೆ ಸಂಕಷ್ಟ : ಬಂಧನಕ್ಕೆ ಪಟ್ಟು ಹಿಡಿದ ‘ಕರ್ನಾಟಕ ರಣಧೀರ ಪಡೆ’

ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ನಿನ್ನೆ ತಡೆ ನೀಡಿದೆ. ಆದರೀಗ ಮತ್ತೆ ನಟ ಉಪೇಂದ್ರಗೆ ಸಂಕಷ್ಟ ಎದುರಾಗಿದ್ದು, ಉಪೇಂದ್ರರನ್ನು ಬಂಧಿಸಬೇಕು ಎಂದು ಕರ್ನಾಟಕ ರಣಧೀರ ಪಡೆ ಪಟ್ಟು ಹಿಡಿದಿದೆ.

ನಾನು ದೂರು ಕೊಟ್ಟು 48 ಗಂಟೆಯಾದರೂ ಇನ್ನೂ ಯಾಕೆ ಅವರನ್ನು ಬಂಧಿಸಿಲ್ಲ, ಉಪೇಂದ್ರರನ್ನು ಈ ಕೂಡಲೇ ಬಂಧಿಸಿ ಎಂದು ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಆಗ್ರಹಿಸಿದ್ದಾರೆ’. ಕೋರ್ಟ್ ಮೂಲಕ ಸ್ಟೇ ತಂದಿದ್ದು ಚೆನ್ನಮ್ಮನ ಕೆರೆ ಅಚ್ಚು ಕಟ್ಟು ವ್ಯಾಪ್ತಿಗೆ, ನಾನು ದೂರು ನೀಡಿದ್ದು ಹಲಸೂರು ಗೇಟ್ ಠಾಣೆಗೆ, ನಾನು ನೀಡಿರುವ ದೂರಿಗೆ ಯಾವುದೇ ಸ್ಟೇ ತಂದಿಲ್ಲ. ನಟ ಉಪೇಂದ್ರರನ್ನು ಯಾಕೆ ಬಂಧಿಸಿಲ್ಲ…? ಈ ಕೂಡಲೇ ಬಂಧಿಸಿ ಎಂದು ಭೈರಪ್ಪ ಹರೀಶ್ ಆಗ್ರಹಿಸಿದ್ದಾರೆ.

ಹೈಕೋರ್ಟ್ ನಲ್ಲಿ ನಟ ಉಪೇಂದ್ರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಟ ಉಪೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸದಂತೆ ತಡೆ ನೀಡಿದೆ. ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪೇಂದ್ರ ಅವರು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ ಐಆರ್ ಗೆ ತಡೆ ನೀಡಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ರಿಯಲ್ ಸ್ಟಾರ್ ಉಪೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದೆ.

ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಲೈವ್ ವಿಡಿಯೋದಲ್ಲಿ ಮಾತನಾಡುವ ವೇಳೆ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಆಡಿರುವ ಮಾತು ಅವರಿಗೆ ಸಂಕಷ್ಟ ತಂದೊಡ್ಡಿತ್ತು. ತಮ್ಮ ವಿರುದ್ಧ ದಾಖಲಾದ ಎಫ್ ಐ ಆರ್ ಗೆ ಮಧ್ಯಂತರ ತಡೆ ಕೋರಿ ನಟ ಉಪೇಂದ್ರ ಅವರು ಹೈಕೋರ್ಟ್ ಹೊರೆ ಹೋಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...