alex Certify BIG NEWS: ಟೋಲ್ ಶುಲ್ಕ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಟಿ.ಆರ್.ಎಸ್. ಮುಖಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟೋಲ್ ಶುಲ್ಕ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಟಿ.ಆರ್.ಎಸ್. ಮುಖಂಡ

ತನ್ನ ವಾಹನಕ್ಕೆ ಟೋಲ್ ಪ್ಲಾಜಾ ಸಿಬ್ಬಂದಿ ಶುಲ್ಕ ಕೇಳಿದನೆಂಬ ಕಾರಣಕ್ಕೆ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡನೊಬ್ಬ ಆತನ ಮೇಲೆ ಹಲ್ಲೆ ನಡೆಸಿ ಟೋಲ್ ಧ್ವಂಸ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಬುಧವಾರದಂದು ಶಾದ್ ನಗರ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಟಿ ಆರ್ ಎಸ್ ಮುಖಂಡ ನಸ್ರುಲ್ಲಾಬಾದ್ ಸರಪಂಚ್ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟಿ ಆರ್ ಎಸ್ ಮುಖಂಡನ ಕಾರು ಟೋಲ್ ಬಳಿ ಬಂದಾಗ ಸಿಬ್ಬಂದಿ, ಶುಲ್ಕ ಪಾವತಿಸಲು ಕೇಳಿದ್ದಾರೆ. ಇಷ್ಟಕ್ಕೆ ಕೆರಳಿದ ಸರಪಂಚ್ ವಾಗ್ವಾದಕ್ಕೆ ಮುಂದಾಗಿದ್ದಾನೆ. ಒಂದು ಹಂತದಲ್ಲಿ ಇದು ವಿಕೋಪಕ್ಕೆ ತಿರುಗಿದ್ದು, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ.

ಅಷ್ಟರಲ್ಲಿ ಉಳಿದ ಸಿಬ್ಬಂದಿ ಓಡಿ ಬಂದು ತಮ್ಮ ಸಹೋದ್ಯೋಗಿಯನ್ನು ಬಿಡಿಸಿಕೊಂಡಿದ್ದಾರೆ. ಇದೀಗ ದೂರು – ಪ್ರತಿ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...