alex Certify BIG NEWS: ಹಬ್ಬ ಮುಗಿಸಿ ಊರಿಂದ ಹೊರಟಿದ್ದಾಗ ಭೀಕರ ಅಪಘಾತ: 6 ಜನರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಬ್ಬ ಮುಗಿಸಿ ಊರಿಂದ ಹೊರಟಿದ್ದಾಗ ಭೀಕರ ಅಪಘಾತ: 6 ಜನರು ದುರ್ಮರಣ

ತುಮಕೂರು: ಗೌರಿ ಗಣೇಶ ಹಬ್ಬ ಮುಗಿಸಿ ಊರಿನಿಂದ ಹೊರಟಿದ್ದ ಕುಟುಂಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕರೆಗಳಪಾಳ್ಯ ಗ್ರಾಮದಲ್ಲಿ ನಡೆದಿದೆ.

ಹಬ್ಬ ಮುಗಿಸಿ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ 6 ಜನರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಈ ನಿಟ್ಟಿನಲ್ಲಿ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಅಪಘಾತವಾಗಿದ್ದ ಕಾರಿನಲ್ಲಿ ಅಕ್ಕಿ, ಬೇಳೆ-ಕಾಳು, ಧವಸ-ಧಾನ್ಯಗಳು ಇದ್ದವು ಎಂದು ತಿಳಿದುಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...