alex Certify KSRTC ಬಸ್, ಮೂರು ಕಾರಿನ ನಡುವೆ ಸರಣಿ ಅಪಘಾತ; ಹಲವರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್, ಮೂರು ಕಾರಿನ ನಡುವೆ ಸರಣಿ ಅಪಘಾತ; ಹಲವರಿಗೆ ಗಂಭೀರ ಗಾಯ

ತುಮಕೂರು: ಭೀಕರ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ತುಮಕೂರಿನ ಡಾ.ಶಿವಕುಮಾರ ಸ್ವಾಮೀಜಿ ಸರ್ಕಲ್ ಬಳಿ ನಡೆದಿದೆ.

ಮೂರು ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸರಣಿ ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಆದ ಘಟನೆಯೂ ನಡೆದಿದೆ.

ಸಿಗ್ನಲ್ ನಲ್ಲಿ ನಿಂತಿದ್ದ ಎರಡು ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗೆ ವೇಗವಾಗಿ ಬಂದ ಸ್ಯಾಂಟ್ರೋ ಕಾರೊಂದು ಗುದ್ದಿದೆ. ಸ್ಯಾಂಟ್ರೋ ಕಾರು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಸೇರಿದ್ದು ಎನ್ನಲಾಗಿದೆ.

ಅಪಘಾತದ ಸ್ಥಳಕ್ಕೆ ಧಾವಿಸಿದ ತುಮಕೂರು ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...