alex Certify BREAKING: ತುಮಕೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತುಮಕೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ತುಮಕೂರು: ತುಮಕೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ದಿಬ್ಬೂರು ಬಳಿ ಕೊಲೆ ಆರೋಪಿ ಮನು ಎಂಬವನ ಕಾಲಿಗೆ ಗುಂಡೇಟು ಬಿದ್ದಿದೆ.

ಸ್ಥಳ ಮಹಜರು ವೇಳೆಯಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ ಮನು ಪರಾರಿಯಾಗಲು ಮುಂದಾಗಿದ್ದಾನೆ ಆತ್ಮ ರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ತುಮಕೂರು ನಗರ ಠಾಣೆ ಸಿಪಿಐ ದಿನೇಶ್ ಫೈರಿಂಗ್ ಮಾಡಿದ್ದಾರೆ.

ಕುಖ್ಯಾತ ರೌಡಿ ರೋಹಿತ್ ಗ್ಯಾಂಗ್ ನಲ್ಲಿ ಮನು ಗುರುತಿಸಿಕೊಂಡಿದ್ದ. ಕೊಲೆ ಪ್ರಕರಣ ಸೇರಿ ಹಲವು ಪ್ರಕರಣಗಳಲ್ಲಿ ಆರೋಪಿ ಮನು ಬೇಕಾಗಿದ್ದ. ಇತ್ತೀಚೆಗೆ ನಡೆದಿದ್ದ ಗ್ಯಾಂಗ್ ವಾರ್ ಸಂಬಂಧ ಆತನನ್ನು ಬಂಧಿಸಲಾಗಿತ್ತು. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದು, ಮೊದಲು ಗಾಳಿಯಲ್ಲಿ ಫೈರಿಂಗ್ ಮಾಡಲಾಗಿದೆ. ಬಳಿಕ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಕಾನ್ಸ್ ಟೆಬಲ್ ಚೇತನ್ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...