alex Certify BREAKING : ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಟ್ವಿಸ್ಟ್ : ‘JDS’ ನಾಯಕ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ ‘NDA’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಟ್ವಿಸ್ಟ್ : ‘JDS’ ನಾಯಕ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ ‘NDA’

ಬೆಂಗಳೂರು : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ನಿರ್ಧರಿಸಿದೆ.

ಜೆಡಿಎಸ್ ಮುಖಂಡ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ.ಬಿಜೆಪಿ ಹೈಕಮಾಂಡ್ ಜೊತೆ ಸಮಾಲೋಚಿಸಿದ ನಂತರ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕೊನೆಯ ಕ್ಷಣದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ನಾಲ್ಕು ಸ್ಥಾನಗಳು ಖಾಲಿ ಇವೆ. ಸದ್ಯದ ಸಂಖ್ಯಾಬಲದಲ್ಲಿ ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರವಿದೆ. ಜೆಡಿಎಸ್ ತನ್ನ 19 ಮತಗಳು ಮತ್ತು ಬಿಜೆಪಿಯ ಸುಮಾರು 20 ಉಳಿದ ಮತಗಳನ್ನು ಹೊಂದಿದ್ದು, ಕಾಂಗ್ರೆಸ್ ಗೆ ಅಚ್ಚರಿ ಮೂಡಿಸಲು ನಾಲ್ವರು ಪಕ್ಷೇತರರ ಬೆಂಬಲದ ಮೇಲೆ ಕಣ್ಣಿಟ್ಟಿದೆ. ಕುಪೇಂದ್ರ ರೆಡ್ಡಿ ಜೆಡಿಎಸ್ ನಿಂದ ಮಾಜಿ ರಾಜ್ಯಸಭಾ ಸದಸ್ಯರಾಗಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...