alex Certify BREAKING : ರಾಮಮಂದಿರಕ್ಕೆ ಬಾಂಬ್ ಸ್ಪೋಟದ ಬೆದರಿಕೆ : ಇಬ್ಬರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮಮಂದಿರಕ್ಕೆ ಬಾಂಬ್ ಸ್ಪೋಟದ ಬೆದರಿಕೆ : ಇಬ್ಬರು ಆರೋಪಿಗಳು ಅರೆಸ್ಟ್

ಉತ್ತರ ಪ್ರದೇಶ : ರಾಮಮಂದಿರಕ್ಕೆ ಬಾಂಬ್ ಸ್ಪೋಟದ ಬೆದರಿಕೆ ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಥಾಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಇಬ್ಬರು ಪ್ಯಾರಾ ಮೆಡಿಕಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಜುಬೈರ್ ಹುಸೇನ್ ಖಾನ್, ಅಲೇಜಾಸ್ ಟಿಎಸ್ ಎಂಬ ಮುಸ್ಲಿಂ ವ್ಯಕ್ತಿಗಳ ಹೆಸರಿನಲ್ಲಿ ಇವರುಗಳು ರಾಮಮಂದಿರಕ್ಕೆ ಬಾಂಬ್ ಸ್ಪೋಟದ ಬೆದರಿಕೆ ಹಾಕಿದ್ದರು. ಅಲ್ಲದೇ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿದ್ದು, ದೇಶಾದ್ಯಂತದ ಸಂತರು ಭಾಗವಹಿಸುವ ನಿರೀಕ್ಷೆಯಿದೆ.ಇದರ ನಡುವೆ ದೇವಾಲಯಕ್ಕೆ ಬಾಂಬ್ ಹಾಕುವ ಬೆದರಿಕೆ ಬಂದಿದ್ದು, ಆತಂಕಕಾರಿಯಾಗಿದೆ. ಈ ಸಂದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್ಟಿಎಫ್ ಎಡಿಜಿ ಅಮಿತಾಭ್ ಯಶ್ ಅವರಿಗೆ ಬೆದರಿಕೆಗಳು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...