alex Certify ಬೆನ್ನಿಗೆ ಚೂರಿ ಇರಿದ ಉದ್ಧವ್ ಠಾಕ್ರೆಗೆ ಆತನ ಸ್ಥಾನ ತೋರಿಸಿದ್ದೇವೆ: ಅಮಿತ್ ಶಾ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆನ್ನಿಗೆ ಚೂರಿ ಇರಿದ ಉದ್ಧವ್ ಠಾಕ್ರೆಗೆ ಆತನ ಸ್ಥಾನ ತೋರಿಸಿದ್ದೇವೆ: ಅಮಿತ್ ಶಾ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ಜನತೆ ನೀಡಿದ ತೀರ್ಪಿಗೆ ವಿರುದ್ಧವಾಗಿ ವರ್ತಿಸಿ ನಮ್ಮ ಬೆನ್ನಿಗೆ ಚೂರಿ ಇರಿದು ಕಾಂಗ್ರೆಸ್ ಹಾಗೂ ಎನ್ ಸಿ ಪಿ ಜೊತೆಗೂಡಿ ಸರ್ಕಾರ ರಚಿಸಿದ ಉದ್ಧವ್ ಠಾಕ್ರೆಗೆ ಆತನ ಸ್ಥಾನ ತೋರಿಸಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಮುಂಬೈಗೆ ಭೇಟಿ ನೀಡಿರುವ ಅವರು, ಪಕ್ಷದ ಶಾಸಕರು ಹಾಗೂ ನಾಯಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಇದೇ ಸಂದರ್ಭದಲ್ಲಿ ಅಮಿತ್ ಶಾ, ಪ್ರಸಿದ್ಧ ಲಾಲ್ ಬಗ್ಚಾರಾಜ ದೇಗುಲಕ್ಕೆ ತೆರಳಿ ಗಣಪತಿಗೆ ನಮನ ಸಲ್ಲಿಸಿದ್ದಾರೆ. ಈ ವೇಳೆ ಅವರೊಂದಿಗೆ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಸಚಿವ ದೇವೇಂದ್ರ ಫಡ್ನವಿಸ್ ಹಾಜರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...