alex Certify ಪ್ರವಾಸಕ್ಕೆಂದು ಬಂದು ಬಾವಿಗೆ ಬಿದ್ದ ಯುವಕ; ಉಡುಪಿ ಶ್ರೀಕೃಷ್ಣ ಮಠದ ಬಳಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಕ್ಕೆಂದು ಬಂದು ಬಾವಿಗೆ ಬಿದ್ದ ಯುವಕ; ಉಡುಪಿ ಶ್ರೀಕೃಷ್ಣ ಮಠದ ಬಳಿ ಘಟನೆ

ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಯುವಕ ಆಯತಪ್ಪಿ ಬಾವಿಗೆ ಬಿದ್ದ ಘಟನೆ ಉಡುಪಿ ಶ್ರೀಕೃಷ್ಣ ಮಠದ ಬಳಿ ನಡೆದಿದೆ.

ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಪ್ರವಾಕ್ಕೆಂದು ಉಡುಪಿಗೆ ಬಂದಿದ್ದಾನೆ. ಈ ವೇಳೆ ಶ್ರೀಕೃಷ್ಣ ಮಠದ ಬಳಿ ಸುತ್ತಾಡುತ್ತಾ ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದ. ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದ ಸಂತೋಷ್ ಬಾವಿಯೊಳಗೆ ಬಿದ್ದಿದ್ದಾನೆ.

ಸ್ಥಳೀಯರು ಬಾವಿಯೊಳಗೆ ಹಗ್ಗ ಬಿಟ್ಟು ಪ್ರವಾಸಿಗನನ್ನು ಮೇಲಕೆತ್ತಿದ್ದಾರೆ. ಬಾವಿಯಲ್ಲಿ ನೀರು ಕಡಿಮೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಪ್ರವಾಸಿಗ ಸುರಕ್ಷಿತವಾಗಿದ್ದಾನೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...