alex Certify ಬಟ್ಟೆ ಅಂಗಡಿಯಲ್ಲೇ ಗುಂಡಿನ ದಾಳಿ: ಬಿಜೆಪಿ ಮುಖಂಡನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಟ್ಟೆ ಅಂಗಡಿಯಲ್ಲೇ ಗುಂಡಿನ ದಾಳಿ: ಬಿಜೆಪಿ ಮುಖಂಡನ ಹತ್ಯೆ

ಗುರುಗ್ರಾಮ್: ಹರಿಯಾಣದ ಗುರುಗ್ರಾಮ್‌ ನಲ್ಲಿ ಬಟ್ಟೆ ಶೋರೂಮ್‌ ಗೆ ಹೋಗಿದ್ದ ಬಿಜೆಪಿ ಮುಖಂಡ ಸುಖ್‌ ಬೀರ್‌ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎಂದು ಗುರುಗ್ರಾಮ್ ಪಶ್ಚಿಮದ ಡಿಸಿಪಿ ದೀಪಕ್ ಸಹರನ್ ಹೇಳಿದ್ದಾರೆ.

ಬಿಜೆಪಿ ಮುಖಂಡ ಮತ್ತು ಸೋಹ್ನಾ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಸುಖ್ ಬೀರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುದ್ವಾರ ರಸ್ತೆ ಬಳಿಯ ಸದರ್ ಬಜಾರ್‌ ನಲ್ಲಿರುವ ಶೋರೂಂನಲ್ಲಿ ಬಿಜೆಪಿ ಮುಖಂಡ ಬಟ್ಟೆ ಖರೀದಿಸಲು ಹೋದಾಗ ಈ ಘಟನೆ ಸಂಭವಿಸಿದೆ. ಸುಖ್ ಬೀರ್ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ನಿಕಟವರ್ತಿ ಎಂದು ಹೇಳಲಾಗಿದೆ.

ಗುರ್ಗಾಂವ್ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಪುರಾವೆಗಳ ತನಿಖೆ ಪ್ರಾರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...