
ಕಳೆದ ವರ್ಷ ಜನವರಿ 16 ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಚುಚ್ಚುಮದ್ದು ನೀಡುವುದರೊಂದಿಗೆ ಈ ಅಭಿಯಾನವನ್ನು ಪ್ರಾರಂಭಿಸಲಾಯಿತು. ವರ್ಚುವಲ್ ಕಾರ್ಯಕ್ರಮದಲ್ಲಿ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾಂಡವಿಯಾ, ಇದು ಭಾರತೀಯರಿಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ದೇಶದ ಕೋವಿಡ್ ಲಸಿಕೆ ಅಭಿಯಾನದಿಂದ ಇಡೀ ಜಗತ್ತು ಆಶ್ಚರ್ಯಚಕಿತವಾಗಿದೆ ಎಂದು ಹೇಳಿದರು. ಇಷ್ಟು ದೊಡ್ಡ ಜನಸಂಖ್ಯೆ ಮತ್ತು ವೈವಿಧ್ಯತೆಯ ಹೊರತಾಗಿಯೂ ಭಾರತವು 156 ಕೋಟಿ ಡೋಸ್ಗಳನ್ನು ನೀಡಿ ಹೊಸ ಮೈಲಿಗಲ್ಲನ್ನು ಸಾಧಿಸಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ಸ್ಥಳೀಯವಾಗಿ ಲಸಿಕೆ ಅಭಿವೃದ್ಧಿಪಡಿಸುವ ಮೂಲಕ ಐಸಿಎಂಆರ್ ಮತ್ತು ಭಾರತ್ ಬಯೋಟೆಕ್, ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತದ ಕನಸನ್ನು ನನಸು ಮಾಡಿದ್ದಾರೆ ಎಂದು ಅವರು ಹೇಳಿದರು. ಅಲ್ಲದೇ ಈ ಸಂದರ್ಭದಲ್ಲಿ ಅವರು ಎಲ್ಲಾ ವಿಜ್ಞಾನಿಗಳನ್ನು ಅಭಿನಂದಿಸಿದರು.
ನಮ್ಮ ಪ್ರಧಾನ ಮಂತ್ರಿಗಳು ಸಂಶೋಧನೆ ನಡೆಸಲು ಮತ್ತು ಸ್ಥಳೀಯ ಕೋವಿಡ್ ಲಸಿಕೆಯನ್ನು ಅಭಿವೃದ್ಧಿಪಡಿಸಲು ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದರು ಮತ್ತು ಲಸಿಕೆ ತಯಾರಿಕಾ ಕಂಪನಿಗಳಲ್ಲಿ ಉತ್ಸಾಹ ತುಂಬಿದರು, ಅವರಿಗೆ ಬೆಂಬಲವನ್ನು ನೀಡಿದರು. ಭಾರತದಲ್ಲಿ ಮಾನವ ಶಕ್ತಿ ಅಥವಾ ಬುದ್ಧಿವಂತರಿಗೆ ಕೊರತೆ ಇರಲಿಲ್ಲ. ಉತ್ತಮ ಲಸಿಕೆಗಳನ್ನ ತಯಾರಿಸುವವರನ್ನು ಗುರುತಿಸುವ ಗುರುತಿಸುವ ಸಾಮರ್ಥ್ಯ ಬೇಕಾಗಿತ್ತು ಅಷ್ಟೇ ಎಂದು ಮಾಂಡವೀಯ ಹೇಳಿದರು.