alex Certify ಉಮೇಶ್​ ಕತ್ತಿ ಸಿಎಂ ಕನಸಿಗೆ ಪರೋಕ್ಷ ಬೆಂಬಲ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಮೇಶ್​ ಕತ್ತಿ ಸಿಎಂ ಕನಸಿಗೆ ಪರೋಕ್ಷ ಬೆಂಬಲ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಬಿಜೆಪಿ ಪಾಳಯದಲ್ಲಿ ಸಿಎಂ ಬದಲಾವಣೆಯ ಕೂಗು ಮುಗಿಯುವಂತೆ ಕಾಣುತ್ತಿಲ್ಲ. ಭಿನ್ನಮತ ಶಮನಕ್ಕೆ ಹೈಕಮಾಂಡ್​ ಪ್ರಯತ್ನದ ಬಳಿಕವೂ ಅಲ್ಲಲ್ಲಿ ಭಿನ್ನರಾಗಗಳು ಕೇಳಿ ಬರುತ್ತಲೇ ಇದೆ. ಸದಾ ಸಿಎಂ ಸ್ಥಾನದ ಕನಸು ಕಾಣುವ ಉಮೇಶ್​ ಕತ್ತಿ ಇಂದು ಮತ್ತೊಮ್ಮೆ ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಎಂದು ಹೇಳಿದ್ದಾರೆ.

ಸಚಿವ ಉಮೇಶ್​ ಕತ್ತಿಯ ಈ ಮಾತಿಗೆ ಪರೋಕ್ಷ ಬೆಂಬಲ ಸೂಚಿಸಿ ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಕತ್ತಿ ಉತ್ತರ ಕರ್ನಾಟಕದವರು ಮುಂದಿನ ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ. ನಾಳೆಯೇ ರಾಜ್ಯದ ಸಿಎಂ ಬದಲಾಗ್ತಾರೆ ಎಂದು ಎಲ್ಲಿಯೂ ಹೇಳಿಲ್ಲ. ಉಮೇಶ್​ ಕತ್ತಿ ಯಾವ ಹಿನ್ನೆಲೆ ಇಟ್ಟುಕೊಂಡು ಈ ಮಾತನ್ನ ಹೇಳಿದ್ರು ಅನ್ನೋದು ಗೊತ್ತಿಲ್ಲ.

ಸುಮಲತಾ ವಿರುದ್ಧ ಹೆಚ್​​ಡಿಕೆ ತಿರುಗಿಬಿದ್ದಿದ್ದರ ಹಿಂದಿನ ಕಾರಣ ಹೇಳಿದ ಸಿದ್ದರಾಮಯ್ಯ

ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನದ ಅವಕಾಶ ಸಿಗಬೇಕಿದೆ. ಹಾಗಂತ ನಾಳೆ, ನಾಡಿದ್ದೋ ಅಥವಾ ಈ ವರ್ಷವೇ ಬೇಕು ಅಂತಲ್ಲ. ಆದರೆ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕಕ್ಕೂ ಈ ಅವಕಾಶ ಬೇಕು. ಖಂಡಿತವಾಗಿಯೂ ಉತ್ತರ ಕರ್ನಾಟಕದವರು ಸಿಎಂ ಆಗಬೇಕು ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...