alex Certify ಅಪಘಾತಕ್ಕೊಳಗಾದವನ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತಕ್ಕೊಳಗಾದವನ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ

ಟೋಲ್ ಪ್ಲಾಜಾ ಬಳಿ ಜೀವ ಉಳಿಸಿಕೊಳ್ಳಲು ರಸ್ತೆಯಲ್ಲಿ ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬರ ನೆರವಿಗೆ ಬಂದ ಕೇಂದ್ರ ಸಚಿವ ಸಂಜೀವ್‌ ಬಲ್ಯಾನ್ ಆತನಿಗೊಂದು ಆಂಬುಲೆನ್ಸ್ ವ್ಯವಸ್ಥೆ ಮಾಡಿ ಮೀರತ್‌ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದಾರೆ.

ತಮ್ಮ ಕಾರಿನಲ್ಲಿ ಸಾಗುತ್ತಿದ್ದ ವೇಳೆ ರಸ್ತೆಯಲ್ಲಿ ಒದ್ದಾಡುತ್ತಿದ್ದ ಈ ವ್ಯಕ್ತಿಯನ್ನು ಗಮನಿಸಿದ ಬಲ್ಯನ್‌ರ ಈ ಹೃದಯವಂತಿಕೆಯ ನಡೆಯು ಕ್ಯಾಮೆರಾವೊಂದರಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೀರತ್‌ನ ಮೋದಿಪುರಂ ಬಳಿ ರಾಷ್ಟ್ರೀಯ ಹೆದ್ದಾರಿ 58ಅನ್ನು ದಾಟುತ್ತಿದ್ದ ಶ್ಯಾಂ ಸಿಂಗ್‌ಗೆ ವೇಗವಾಗಿ ಹೋಗುತ್ತಿದ್ದ ಕಾರೊಂದು ಗುದ್ದಿದ ಪರಿಣಾಮ ಅವರಿಗೆ ಗಂಭೀರವಾದ ಗಾಯಗಳಾಗಿವೆ. ಸಹಾಯಕ್ಕಾಗಿ ಅಂಗಲಾಚುತ್ತಿದ್ದರೂ ಆತನ ನೆರವಿಗೆ ಯಾರೂ ಬಂದಿಲ್ಲ.

ಇದಾದ ಕೆಲ ಹೊತ್ತಿಗೆ ಅದೇ ರಸ್ತೆಯಲ್ಲಿ ಸಾಗಿ ಬರುತ್ತಿದ್ದ ಕೇಂದ್ರ ಸಚಿವರು ಶ್ಯಾಂರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರದೃಷ್ಟವಶಾತ್‌ ಚಿಕಿತ್ಸೆ ಫಲಕಾರಿಯಾಗದ ಕಾರಣ ಸಂಜೀವ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರಿನ ಚಾಲಕನನ್ನು ಪತ್ತೆ ಮಾಡಲು ಯತ್ನಿಸುತ್ತಿದ್ದು, ಟೋಲ್ ಪ್ಲಾಜಾ ಬಳಿ ಇರುವ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಶ್ಯಾಂಗೆ ಡಿಕ್ಕಿ ಹೊಡೆದ ಕಾರು ಹಾಗೂ ಅದರ ಮಾಲೀಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...