alex Certify ಸಮುದ್ರ ವಿಮಾನ ಸೇವೆ ಆರಂಭಿಸಲು ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದ ಯುಪಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮುದ್ರ ವಿಮಾನ ಸೇವೆ ಆರಂಭಿಸಲು ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದ ಯುಪಿ ಸರ್ಕಾರ

ಉತ್ತರ ಪ್ರದೇಶ ಸರ್ಕಾರವು ವಾರಣಾಸಿ ಹಾಗೂ ಗೋರಕ್​ಪುರದ ನಡುವೆ ರಾಜ್ಯದ ಮೊಟ್ಟ ಮೊದಲ ಸಮುದ್ರ ವಿಮಾನ ಸೇವೆಯನ್ನು ಆರಂಭಿಸಲು ಮುಂದಾಗಿದೆ. ಈ ಬಗ್ಗೆ ಅನುಮತಿ ಕೋರಿ ಯೋಗಿ ಆದಿತ್ಯನಾಥ್​ ನೇತೃತ್ವದ ಸರ್ಕಾರವು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದೆ.

ಉತ್ತರ ಪ್ರದೇಶದ ನಾಗರಿಕ ವಿಮಾನಯಾನ ಸಚಿವ ನಂದ ಗೋಪಾಲ್​ ಗುಪ್ತಾ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಯ ವೇಳೆ ಗೋರಕಪುರದಿಂದ ವಾರಣಾಸಿಗೆ ಸೀ ಪ್ಲೇನ್​ ಸೇವೆಯನ್ನು ಆರಂಭಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಜೊತೆಯಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಇನ್ನೂ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ನಂದಗೋಪಾಲ ಗುಪ್ತಾ ನಂದಿ ಜ್ಯೋತಿರಾದಿತ್ಯ ಸಿಂಧಿಯಾ ಬಳಿ ಸೀ ಪ್ಲೇನ್​ ಸೇವೆಯ ಸಂಬಂಧ ತುರ್ತು ಕ್ರಮ ಜಾರಿಗೆ ಬರುವಂತೆ ಹಾಗೂ ಈ ಯೋಜನೆಯ ಸಂಬಂಧ ಅಧ್ಯಯನ ನಡೆಸುವಂತೆ ಕೇಳಿದ್ದಾರೆ ಎನ್ನಲಾಗಿದೆ.

ಸೀ ಪ್ಲೇನ್​ ಸೇವೆಯು ಭೂಮಿ ಹಾಗೂ ಜಲಮಾರ್ಗಗಳರೆಡರಲ್ಲಿಯೂ ಚಲಿಸುವ ಸಾಮರ್ಥ್ಯ ಹೊಂದಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಒಟ್ಟು 100 ಸಮುದ್ರ ವಿಮಾನ ಸೇವೆ ಆರಂಭಕ್ಕೆ ಯೋಚನೆ ನಡೆಸಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...