alex Certify ಅಡುಗೆ ಮನೆಯಲ್ಲಿದ್ದ ಅತ್ತೆ ಬಳಿ ಬಂದ ಅಳಿಯನಿಂದಲೇ ಘೋರ ಕೃತ್ಯ: ಹೋರಾಡಿ ಪ್ರಾಣ ಬಿಟ್ಟ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡುಗೆ ಮನೆಯಲ್ಲಿದ್ದ ಅತ್ತೆ ಬಳಿ ಬಂದ ಅಳಿಯನಿಂದಲೇ ಘೋರ ಕೃತ್ಯ: ಹೋರಾಡಿ ಪ್ರಾಣ ಬಿಟ್ಟ ಮಹಿಳೆ

ಮೀರತ್: ಉತ್ತರಪ್ರದೇಶದ ಮೀರತ್ ನಲ್ಲಿ ಅತ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಸೋದರಳಿಯನನ್ನು ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಮೀರತ್ ನ ಜಾನಿ ಗ್ರಾಮದ ನಿವಾಸಿಯಾಗಿರುವ ಮಹಿಳೆ ಮನೆಗೆ ಬಂದಿದ್ದ ಆರೋಪಿ ಇಂತಹ ಕೃತ್ಯವೆಸಗಿದ್ದಾನೆ. ಮಕ್ಕಳು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಒಂಟಿಯಾಗಿದ್ದ ಅತ್ತೆ ಮನೆಗೆ ಬಂದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯ ತನ್ನ ಕೆನ್ನೆಗೆ ಬಾರಿಸಿದ್ದು, ಮನೆಯವರಿಗೆ ವಿಷಯ ತಿಳಿಸುವ ಭಯದಲ್ಲಿ ಆರೋಪಿ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಮಹಿಳೆಯ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ.

ಕೊಲೆ ಪ್ರಕರಣ ಬೆಳಕಿಗೆ ಬರುತ್ತಲೇ ತನಿಖೆ ಕೈಗೊಂಡ ಪೊಲೀಸರು ಜಾನಿ ಗ್ರಾಮದಲ್ಲಿ ಇರುವ ಆಕೆಯ ಸಂಬಂಧಿಕರ ವಿಚಾರಣೆ ನಡೆಸಿದ್ದಾರೆ. ಆರೋಪಿ ಕೈಯಲ್ಲಿ ತರಚಿದ ಗಾಯ ಮತ್ತು ಆತನ ಚಪ್ಪಲಿಯಲ್ಲಿ ರಕ್ತದ ಕಲೆ ಇರುವುದನ್ನು ಗಮನಿಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅತ್ತೆಯನ್ನು ಕೊಲೆ ಮಾಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

ಈ ಹಿಂದೆಯೂ ಮಹಿಳೆ ಮೇಲೆ ಎರಡು ಸಲ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆ ಕುಟುಂಬದವರಿಗೆ ವಿಷಯ ತಿಳಿಸಿರಲಿಲ್ಲ. ಬುಧವಾರ ಮತ್ತೆ ಅತ್ತೆ ಮೇಲೆ ಮುಗಿಬಿದ್ದ ಆರೋಪಿ ಲೈಂಗಿಕ ದೌರ್ಜನ್ಯವೆಸಗಲು ಮುಂದಾಗಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಕೊಲೆ ಮಾಡಿದ್ದಾನೆ. ಮಹಿಳೆ ಸಾಯುವ ಮೊದಲು ಆತನೊಂದಿಗೆ ಭಾರೀ ಹೋರಾಟ ನಡೆಸಿದ್ದರೂ ಅಂತಿಮವಾಗಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...